ಆರ್‌ಸಿಬಿ ಐತಿಹಾಸಿಕ ಗೆಲುವಿನ ಸಂತೋಷದ ಕ್ಷಣ ದುರಂತವಾಯ್ತು – ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಟ್ವೀಟ್

By
2 Min Read

– ಘಟನೆಯಾದ 3 ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಸಂದೇಶ

ಬೆಂಗಳೂರು: ಯಾವ ದಿನ ಆರ್‌ಸಿಬಿ (RCB) ಫ್ರ್ಯಾಂಚೈಸಿಯ ಇತಿಹಾಸದಲ್ಲಿಯೇ ಅತ್ಯಂತ ಸಂತೋಷದ ಕ್ಷಣವಾಗಬೇಕಿತ್ತೋ, ಅದು ದುರಂತದ ಕ್ಷಣವಾಯಿತು ಎಂದು ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ನೆನೆದು ವಿರಾಟ್ ಕೊಹ್ಲಿ ದುಃಖಿಸಿದ್ದಾರೆ. ದುರಂತವಾದ 3 ತಿಂಗಳ ಬಳಿಕ ಆರ್‌ಸಿಬಿ ಆಟಾಗಾರ ವಿರಾಟ್ ಕೊಹ್ಲಿ (Virat Kohli) ಅಭಿಮಾನಿಗಳಿಗೆ ಸಂದೇಶವೊಂದನ್ನು ನೀಡಿದ್ದಾರೆ.ಇದನ್ನೂ ಓದಿ: ಕೇರಳ ಮೂಲದ ಅರ್ಚಕನ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್‌ – ಪ್ರತಿದೂರು; ದೂರುದಾರೆ ಸೇರಿ ಐವರ ಬಂಧನ

ಆರ್‌ಸಿಬಿ ಅಧಿಕೃತ ಎಕ್ಸ್ (RCB Official) ಖಾತೆಯ ಮೂಲಕ ಸಂದೇಶ ನೀಡಿರುವ ಕೊಹ್ಲಿ, ಜೂ.4ರಂದು ನಡೆದ ಘಟನೆಯನ್ನು ಎದುರಿಸಲು ಜೀವನದಲ್ಲಿ ಯಾರಿಂದಲೂ ಸಾಧ್ಯವಿಲ್ಲ. ಯಾವ ದಿನ ಆರ್‌ಸಿಬಿ ಫ್ರ್ಯಾಂಚೈಸಿಯ ಇತಿಹಾಸದಲ್ಲಿಯೇ ಅತ್ಯಂತ ಸಂತೋಷದ ಕ್ಷಣವಾಗಬೇಕಿತ್ತೋ, ಅದು ದುರಂತವಾಗಿ ಬದಲಾಯ್ತು. ಆ ಸಮಯದಲ್ಲಿ ಜೀವ ಕಳೆದುಕೊಂಡವರು ಮತ್ತು ಗಾಯಾಳುಗಳ ಬಗ್ಗೆ ನಾನು ಚಿಂತಿತನಾಗಿದ್ದೇನೆ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸಿದ್ದೇನೆ. ನೀವೆಲ್ಲರೂ ಇದೀಗ ನಮ್ಮ ಕಥೆಯ ಭಾಗವಾಗಿದ್ದೀರಿ. ಇನ್ಮುಂದೆ ನಾವು ಒಟ್ಟಾಗಿ ಕಾಳಜಿ, ಜವಾಬ್ದಾರಿ ಹಾಗೂ ಗೌರವದೊಂದಿಗೆ ಮುಂದುವರಿಯೋಣ ಎಂದು ಬರೆದುಕೊಂಡಿದ್ದಾರೆ.

ಜೂ.3ರಂದು ನಡೆದ ಐಪಿಎಲ್ 2025ರ (IPL 2025) ಫಿನಾಲೆಯಲ್ಲಿ ಆರ್‌ಸಿಬಿ ತಂಡ 18 ವರ್ಷಗಳ ಬಳಿಕ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಜೂ.4ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು. ಹಲವರು ಆರ್‌ಸಿಬಿ ಅಭಿಮಾನಿಗಳು ಗಾಯಗೊಂಡಿದ್ದರು.ಇದನ್ನೂ ಓದಿ: ಸಚಿವ ಹೆಚ್‌.ಸಿ ಮಹದೇವಪ್ಪ ಹೆಸರಿನಲ್ಲಿ ಬರೋಬ್ಬರಿ 27 ಲಕ್ಷ ರೂ. ವಂಚಿಸಿದ ಮಹಿಳೆ

Share This Article