ಯೇಸು ಕ್ರಿಸ್ತರ ಉದಾತ್ತ ಸಂದೇಶಗಳನ್ನು ಸ್ಮರಿಸೋಣ: ಮೋದಿ ಕ್ರಿಸ್‌ಮಸ್‌ ಶುಭಾಶಯ

Public TV
1 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ವಿಶ್ವದ ಎಲ್ಲರಿಗೂ ಕ್ರಿಸ್‌ಮಸ್‌ ಶುಭಾಶಯ ಕೋರಿದ್ದಾರೆ. ಯೇಸು ಕ್ರಿಸ್ತರ ಉದಾತ್ತ ಸಂದೇಶಗಳನ್ನು ಸ್ಮರಿಸೋಣ ಎಂದು ಮೋದಿ ಅವರು ಸಂದೇಶ ನೀಡಿದ್ದಾರೆ.

ಎಲ್ಲರಿಗೂ ಕ್ರಿಸ್‌ಮಸ್‌ ಶುಭಾಶಯಗಳು! ಏಸು ಕ್ರಿಸ್ತರ ಜೀವನ, ಉದಾತ್ತ ಸಂದೇಶಗಳನ್ನು ನಾವು ನೆನೆಯೋಣ. ಸೇವೆ, ದಯೆ, ನಮ್ರತೆಯನ್ನು ಯೇಸು ಕ್ರಿಸ್ತರ ಸಂದೇಶಗಳು ಪ್ರತಿಪಾದಿಸಿವೆ. ಎಲ್ಲರೂ ಆರೋಗ್ಯ, ಸಾಮರಸ್ಯದಿಂದಿರಿ ಎಂದು ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

ನಾಗರಿಕರು, ವಿಶೇಷವಾಗಿ ಕ್ರೈಸ್ತ ಸಹೋದರ-ಸಹೋದರಿಯರಿಗೆ ಕ್ರಿಸ್‌ಮಸ್‌ ಹಬ್ಬದ ಶುಭಾಶಯಗಳು. ಈ ಸಂತೋಷದಾಯಕ ಸಂದರ್ಭದಲ್ಲಿ, ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಆಧರಿಸಿ ಸಮಾಜವನ್ನು ನಿರ್ಮಿಸಲು ನಮ್ಮ ಜೀವನದಲ್ಲಿ ಯೇಸು ಕ್ರಿಸ್ತರ ಬೋಧನೆಗಳನ್ನು ಅಳವಡಿಸಿಕೊಳ್ಳುವ ಸಂಕಲ್ಪ ಮಾಡೋಣ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಕರೆ ನೀಡಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಟ್ವೀಟ್‌ ಮಾಡಿ, ಎಲ್ಲರಿಗೂ ಕ್ರಿಸ್‌ಮಸ್‌ ಶುಭಾಶಯಗಳು. ಎಲ್ಲ ಆರೋಗ್ಯ, ಸಂತೋಷ ಮತ್ತು ಸಾಮರಸ್ಯವನ್ನು ಬಯಸುತ್ತೇನೆ ಎಂದು ಶುಭಹಾರೈಸಿದ್ದಾರೆ. ಇದನ್ನೂ ಓದಿ: ರಾಧೆ ಶ್ಯಾಮ್ ಸಿನಿಮಾದ ಕ್ಲೈಮ್ಯಾಕ್ ಹೈಲೈಟ್ ಆಗಿರುತ್ತೆ: ಪ್ರಭಾಸ್

ವಿಶ್ವದೆಲ್ಲೆಡೆ ಕೊರೊನಾ ವೈರಸ್‌ ರೂಪಾಂತರಿ ಓಮಿಕ್ರಾನ್‌ ವ್ಯಾಪಕವಾಗಿ ಹರಡುತ್ತಿದ್ದು, ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಕ್ರಿಸ್‌ಮಸ್‌ ಅದ್ದೂರಿ ಆಚರಣೆಗೆ ತಡೆ ನೀಡಿರುವ ಸರ್ಕಾರಗಳು, ಕೋವಿಡ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಕ್ರಿಸ್‌ಮಸ್‌ ಆಚರಿಸುವಂತೆ ಜನತೆಗೆ ಸಲಹೆ ನೀಡಿವೆ.

Share This Article
Leave a Comment

Leave a Reply

Your email address will not be published. Required fields are marked *