ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಶಿಫಾರಸು

By
1 Min Read

ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಪರಿಶಿಷ್ಟ ಪಂಗಡ (ST) ಸಮುದಾಯಕ್ಕೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.

ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಕಳುಹಿಸಲಾಗಿದೆ. ಇದನ್ನೂ ಓದಿ: ವಿಪಕ್ಷ ನಾಯಕರಿಲ್ಲದೆ ಬಜೆಟ್ ಅಧಿವೇಶನ ನಡೀತಿರೋದು ಇದೇ ಮೊದಲು: ಬಿಜೆಪಿ ವಿರುದ್ಧ ಸಿಎಂ ಗುಡುಗು

ಈ ಹಿಂದೆ ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಇದ್ದ ಕಾಡು ಕುರುಬರನ್ನು ಮಾತ್ರವೇ ಎಸ್‌ಟಿ ಪಂಗಡಕ್ಕೆ ಸೇರಿಸಲಾಗಿತ್ತು. ಬಳಿಕ 2020-21ರಲ್ಲಿ ರಾಜ್ಯಾದ್ಯಂತ ಎಲ್ಲಾ ಕುರುಬ ಸಮುದಾಯದವರನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಬೃಹತ್ ಪಾದಯಾತ್ರೆ ನಡೆಸಿದ್ದರು. ಇದನ್ನೂ ಓದಿ: ಭಾರತದ ಶ್ರೀಮಂತ ಶಾಸಕರಲ್ಲಿ ಡಿ.ಕೆ. ಶಿವಕುಮಾರ್‌ ನಂ.1

ಈಗ ರಾಜ್ಯಾದ್ಯಂತ ಎಲ್ಲ ಕುರುಬ ಸಮುದಾಯದವರನ್ನು ಎಸ್‌ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್