ರಾಷ್ಟ್ರಪಿತನ ಬಗ್ಗೆ ಅವಹೇಳನಕಾರಿ ಹೇಳಿಕೆ – ಕಾಳಿಚರಣ್ ಮಹಾರಾಜ್ ಬಂಧನ

Public TV
1 Min Read

ಮುಂಬೈ: ಮಹಾತ್ಮಾ ಗಾಂಧಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪೊಲೀಸರು ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್‌ನನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ನಗರದ ಪೊಲೀಸರು ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಕಾಳಿಚರಣ್ ಅವರನ್ನು ಛತ್ತೀಸ್‌ಗಢದಲ್ಲಿ ಬಂಧಿಸಲಾಗಿದೆ ಎಂದು ಗುರುವಾರ ತಿಳಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್ 26 ರಂದು ಛತ್ತೀಸ್‌ಗಢದ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಳಿಚರಣ್ ಮಹಾತ್ಮಾ ಗಾಂಧಿಯವರ ವಿರುದ್ಧ ಹೇಳಿಕೆಯನು ನೀಡಿದ್ದರು. ಇದನ್ನು ಹೊರತಪಡಿಸಿಯೂ ಕಾಳಿಚರಣ್ ಇಂತಹ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ವಾಸ ಅನುಭವಿಸಿದ್ದರು. ಇದೀಗ ಮತ್ತೆ ಪೊಲೀಸರು ಕಾಳಿಚರಣ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್‌ಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಕೆ

ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಸಚಿವ ಜಿತೇಂದ್ರ ಅವ್ಹಾದ್ ಕಾಳಿಚರಣ್‌ರ ವಿರುದ್ಧ ದೂರು ನೀಡಿದ್ದರು. ಪ್ರಕರಣವನ್ನು ದಾಖಲಿಸಿಕೊಂಡ ನೌಪಾದ ಪೊಲೀಸ್ ಠಾಣೆ ಎಂಟು ಸಿಬ್ಬಂದಿ ತಂಡ ರಾಯ್‌ಪುರಕ್ಕೆ ತೆರಳಿ ಕಾಳಿಚರಣ್ ಮಹಾರಾಜ್‌ನನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ

Share This Article
Leave a Comment

Leave a Reply

Your email address will not be published. Required fields are marked *