‘ಮಗಳು ಜಾನಕಿ’ ಸೀರಿಯಲ್ ಖ್ಯಾತಿಯ ಕಿರುತೆರೆಯ ಖ್ಯಾತ ಕಲಾವಿದ ಮಂಡ್ಯ ರವಿ ನಿಧನ

Public TV
1 Min Read

ನ್ನಡ ಕಿರುತೆರೆಯ (Television)  ಲೋಕದ ಖ್ಯಾತ ಕಲಾವಿದ (Actor) ಮಂಡ್ಯ ರವಿ (Mandya Ravi) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರವಿ ಅಸಂಖ್ಯಾತ ಅಭಿಮಾನಿಗಳನ್ನು ಅಗಲಿದ್ದಾರೆ. ರವಿ ನಿಧನಕ್ಕೆ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಅಧ್ಯಕ್ಷರಾದ ಎಸ್.ವಿ. ಶಿವಕುಮಾರ್ ಸೇರಿದಂತೆ ಟೆಲಿವಿಷನ್ ಉದ್ಯಮದ ಅನೇಕ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ರವಿ ಪೂರ್ಣ ಹೆಸರು ರವಿ ಪ್ರಸಾದ್ ಎಂ. ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಸುತ್ತಲೇ ಮಂಡ್ಯ ರವಿ ಆಗಿ ಫೇಮಸ್ ಆದವರು. ರವಿ ಬಾಲ್ಯದಿಂದಲೇ ನಾಟಕಗಳಲ್ಲಿ ಅಭಿನಯಿಸುತ್ತಾ, ನಂತರ ಬಣ್ಣದ ಲೋಕದತ್ತ ಒಲವು ಬೆಳೆಸಿಕೊಂಡವರು. ಓದಿದ್ದು ಎಂಎ ಇಂಗ್ಲಿಷ್ ಮತ್ತು ಎಲ್‍ಎಲ್‍ಬಿ ಆದರೂ, ಆಯ್ಕೆ ಮಾಡಿಕೊಂಡ ವೃತ್ತಿ ಮಾತ್ರ ನಟನೆ. 1996ರಲ್ಲಿ ಜನದನಿ ಹವ್ಯಾಸಿ ನಾಟಕ ತಂಡ ಸೇರಿ, ಅಲ್ಲಿಂದ ಟಿ.ಎಸ್. ನಾಗಾಭರಣ ನಿರ್ದೇಶನದ ‘ಮಹಾಮಾಯಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಜಗತ್ತಿಗೆ ಕಾಲಿಟ್ಟರು. ಇದನ್ನೂ ಓದಿ:‘ಮದುವೆ’ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆದ ಮಹಾಲಕ್ಷ್ಮಿ ರವೀಂದರ್

ಅನೇಕ ಧಾರಾವಾಹಿಗಳಲ್ಲಿ ರವಿ ನಟಿಸಿದ್ದರು, ಮೊದಲು ಬ್ರೇಕ್ ನೀಡಿದ ಧಾರಾವಾಹಿ ಮಿಂಚು, ನಂತರ ಮುಕ್ತಮುಕ್ತ, ಚಿತ್ರಲೇಖ, ಯಶೋಧೆ, ವರಲಕ್ಷ್ಮಿ ಸ್ಟೋರ್ಸ್  ಸೇರಿದಂತೆ ಸಾಕಷ್ಟು ಸೀರಿಯಲ್ ಗಳಲ್ಲಿ ನಟಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಪ್ರಸಾರವಾದ ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ (Chandu Bhargi) ಪಾತ್ರದ ಮೂಲಕ ರವಿ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು.  ಅಲ್ಲದೇ, ಕಾಫಿತೋಟ ಸೇರಿದಂತೆ ಹಲವು ಸಿನಿಮಾಗಳಲ್ಲೂ ಇವರು ನಟಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *