ಮುಂಬೈನಲ್ಲಿ ಕಾಲು ಆಪರೇಷನ್‍ಗೆ ಒಳಗಾದ ರೇಣುಕಾಚಾರ್ಯ

Public TV
1 Min Read

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡ, ಪರಿಣಾಮ ವೈದ್ಯರ ಸಲಹೆ ಮೇರೆಗೆ ಮುಂಬೈನ ಆಸ್ಪತ್ರೆಯಲ್ಲಿ ಆಪರೇಷನ್‍ಗೆ ಒಳಗಾಗಿದ್ದೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ:
ಆತ್ಮೀಯ ಬಂಧುಗಳೇ, ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತ್ರೆಯಲ್ಲಿ ಆಪರೇಷನ್‍ಗೆ ಒಳಗಾಗಿದ್ದೇನೆ. ಇದನ್ನೂ ಓದಿ: ರಾಜ್ಯದಲ್ಲಿ 282 ಕೇಸ್ – 15 ಮಂದಿಯಲ್ಲಿ ಕಾಣಿಸಿಕೊಂಡ AY 12 ಪ್ರಭೇದ

ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದು, ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳ ಕಾಲ ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನಿಮ್ಮ ಅಹವಾಲುಗಳಿಗೆ ದೂರವಾಣಿ ಮೂಲಕ ನನ್ನ ಆಪ್ತ ಸಹಾಯಕರು ಸ್ಪಂದಿಸಲಿದ್ದು, ಸಹಕರಿಸಬೇಕಾಗಿ ವಿನಯಪೂರ್ವಕವಾಗಿ ವಿನಂತಿಸುತ್ತೇನೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ

Share This Article
Leave a Comment

Leave a Reply

Your email address will not be published. Required fields are marked *