ದಲಿತರ ಓಲೈಕೆಗಾಗಿ SC, ST ಸಮಾವೇಶ ಮಾಡಿದ ರೇಣುಕಾಚಾರ್ಯ – ಮಹಿಳೆಯರೊಂದಿಗೆ ಸಖತ್ ಸ್ಟೆಪ್

Public TV
1 Min Read

ದಾವಣಗೆರೆ: ನಕಲಿ ಎಸ್‍ಟಿ ಸರ್ಟಿಫಿಕೇಟ್ ಪಡೆದ ಆರೋಪದಿಂದ ಹೊರಬರಲು ದಲಿತರ ಓಲೈಕೆಗಾಗಿ ಎಂ.ಪಿ.ರೇಣುಕಾಚಾರ್ಯ ಅವರು ಬೃಹತ್ ಎಸ್‍ಸಿ, ಎಸ್‍ಟಿ ಸಮಾವೇಶ ಮಾಡಲಾಯಿತು. ಇದೇ ವೇಳೆ ಸಾಕಷ್ಟು ಮಹಿಳೆಯರೊಂದಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಸಖತ್ ಸ್ಟೆಪ್ ಹಾಕಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ರೇಣುಕಾಚಾರ್ಯ ತಮ್ಮ ಡ್ಯಾಮೇಜ್ ಕಂಟ್ರೋಲ್ ಮಾಡಲು ಈ ಸಮಾವೇಶವನ್ನು ಆಯೋಜನೆ ಮಾಡಿದ್ದರು. ಈ ವೇಳೆ ದಲಿತರಲ್ಲಿ ಸಂದೇಶ ರವಾನಿಸಿದರು. ಇದಲ್ಲದೆ ವೇದಿಕೆ ಕಾರ್ಯಕ್ರಮಕ್ಕೆ ತೆರಳುವ ಮುನ್ನವೇ ಮಹಿಳೆಯ ಜೊತೆ ಸಖತ್ ಸ್ಟೆಪ್ ಹಾಕಿದರು. ಇದನ್ನೂ ಓದಿ:  ಗೃಹ ಸಚಿವರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಆಗಲ್ಲ: ಆರ್.ಧ್ರುವನಾರಾಯಣ್ 

ರೇಣುಕಾಚಾರ್ಯ ಪುತ್ರಿ ಎಸ್‍ಸಿ ಜಾತಿ ಪ್ರಮಾಣ ಪತ್ರ ಪಡೆದ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳ ಮುಖಂಡರು ಕೆಲ ದಿನಗಳ ಹಿಂದೆ ರೇಣುಕಾ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅದಕ್ಕೆ ಇದು ಹೊನ್ನಾಳಿಯಲ್ಲಿ ಎಸ್‍ಸಿ, ಎಸ್‍ಟಿ ಸಮಾವೇಶವನ್ನು ರೇಣುಕಾಚಾರ್ಯ ಮಾಡಿದ್ದಾರೆ. ಈ ವೇಳೆ ಸಾಕಷ್ಟು ಜನ ಹಿಂದುಳಿದ ಸಮುದಾಯದವರನ್ನು ಸೇರಿಸಿ ತನ್ನ ಶಕ್ತಿ ಪ್ರದರ್ಶನ ಮಾಡಿದರು.

ಈ ವೇಳೆ ಸಮಾವೇಶಕ್ಕೆ ಆಗಮಿಸುವ ಮೊದಲು ಬೃಹತ್ ಮೆರವಣೆಗೆ ಮಾಡಿ ಮೆರವಣಿಗೆಯಲ್ಲಿ ಮಹಿಳೆಯರನ್ನು ಎಳೆದುಕೊಂಡು ಸ್ಟೇಪ್ ಹಾಕಿದ್ದು, ಎಲ್ಲರನ್ನೂ ಉಬ್ಬೇರಿಸುವಂತಿತ್ತು. ಇದನ್ನೂ ಓದಿ: ರೌಡಿಗಳು ಸತ್ರೆ 25 ಲಕ್ಷ ರೂ. ಪರಿಹಾರ ಕೊಡ್ತೀರಾ, ಸಂತೋಷ್ ಪಾಟೀಲ್‍ಗೆ ಯಾಕಿಲ್ಲ: ಸಿ.ಎಂ.ಇಬ್ರಾಹಿಂ ಕಿಡಿ

Share This Article
Leave a Comment

Leave a Reply

Your email address will not be published. Required fields are marked *