ದರ್ಶನ್‌ಗೆ ಆಪರೇಷನ್‌ ಮಾಡಬೇಕಿದೆ, ಜಾಮೀನು ನೀಡಿ: ಹೈಕೋರ್ಟ್‌ನಲ್ಲಿ ವಕೀಲರ ಮನವಿ

Public TV
1 Min Read

ಬೆಂಗಳೂರು: ನಟ ದರ್ಶನ್‌ (Actor Darshan) ಜಾಮೀನು (Bail) ಅರ್ಜಿಯ ವಿಚಾರಣೆಯನ್ನು  ಹೈಕೋರ್ಟ್‌ (High Court)  ಅ.28ಕ್ಕೆ ಮುಂದೂಡಿದೆ.

ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ದರ್ಶನ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ನಾಗೇಶ್‌, ತೀವ್ರವಾದ ಬೆನ್ನು ನೋಬಿನಿಂದ ಬಳಲುತ್ತಿರುವ ದರ್ಶನ್‌ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿದೆ. ಹೀಗಾಗಿ ಜಾಮೀನು ಅರ್ಜಿ ಮಂಜೂರು ಮಾಡಬೇಕೆಂದು ಮನವಿ ಮಾಡಿದರು.

ದರ್ಶನ್‌ ಅವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಅದಷ್ಟು ಬೇಗ ಸರ್ಜಿಕಲ್ ಅಪರೇಶನ್ (Surgical Operation) ಅವಶ್ಯಕತೆ ಇರುವದರಿಂದ ಜಾಮೀನನ್ನು ಶೀಘ್ರವಾಗಿ ನೀಡಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: ಮಳೆಯಾರ್ಭಟಕ್ಕೆ ತತ್ತರಿಸಿ ಹೋದ ಟಾಟಾ ನಗರ – 300ಕ್ಕೂ ಹೆಚ್ಚು ಮನೆಗಳು ಜಲಾವೃತ

ಈ ವೇಳೆ ನ್ಯಾಯಾಧೀಶರು, ಕೂಡಲೇ ವೈದ್ಯಕೀಯ ವರದಿಗಳ ಸಲ್ಲಿಕೆ ಮಾಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದರು.

 

Share This Article