ಬೆಂಗಳೂರು: ವಿಚಾರಣೆ ಮುಗಿಸಿ ಹೊರಗೆ ಬರುವಾಗ ಕೋರ್ಟ್ (Court) ಆವರಣದಲ್ಲಿ ಪವಿತ್ರಗೌಡ (Pavithra Gowda) ಅವರು ದರ್ಶನ್ (Darshan) ಕೈ ಹಿಡಿದುಕೊಂಡು ಬಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿಗಳು ಇಂದು 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾದರು. ಪವಿತ್ರಾ ಗೌಡ ಬಿಳಿ ಬಣ್ಣದ ಸೀರೆ ಧರಿಸಿದ್ದರೆ ದರ್ಶನ್ ಕಪ್ಪು ಬಣ್ಣ ಡ್ರೆಸ್ ಧರಿಸಿದ್ದರು.
ಸ್ನೇಹಿತ ಧನ್ವೀರ್ ಜೊತೆ ದರ್ಶನ್ ನ್ಯಾಯಾಲಯಕ್ಕೆ ಆಗಮಿಸಿದರು. ವಿಚಾರಣೆ ಆರಂಭವಾಗುತ್ತಿದ್ದಾಗ ದರ್ಶನ್ ದೂರದಲ್ಲಿ ನಿಂತಿದ್ದರು. ಹೆಸರನ್ನು ಕರೆದಾಗಲೂ ದರ್ಶನ್ ದೂರದಲ್ಲೇ ಇದ್ದರು. ಈ ವೇಳೆ ಜಡ್ಜ್ ಆರೋಪಿ ಸಂಖ್ಯೆಗೆ ಅನುಗುಣವಾಗಿ ನಿಲ್ಲುವಂತೆ ಸೂಚಿಸಿ ಪವಿತ್ರಾ ಗೌಡ ಬಳಿ ನಿಲ್ಲಲು ಹೇಳಿದರು. ಜಡ್ಜ್ ಸೂಚನೆಯ ನಂತರ ದರ್ಶನ್ ಪವಿತ್ರಾ ಗೌಡ ಬಳಿ ಬಂದು ನಿಂತುಕೊಂಡರು. ಇದನ್ನೂ ಓದಿ: ‘ಮುದ್ದು ರಾಕ್ಷಸಿ’ ಹಾಡಿಗೆ ಪತ್ನಿ ಕೈಹಿಡಿದು ದರ್ಶನ್ ರೊಮ್ಯಾಂಟಿಕ್ ಡ್ಯಾನ್ಸ್
ಇಂದಿನ ವಿಚಾರಣೆಗೆ ಎ3 ಪವನ್ ಗೈರಾಗಿದ್ದರೆ ಎ11 ನಾಗರಾಜು ಕೇಸ್ ಮೇಲೆ ಹೊಸಪೇಟೆಗೆ ತೆರಳಲು ಅನುಮತಿ ನೀಡಿತು. ಆರೋಪಿಗಳ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಜುಲೈ 10 ಕ್ಕೆ ಮುಂದೂಡಿಕೆ ಮಾಡಲಾಯಿತು. ಕೋರ್ಟ್ ಪವಿತ್ರಾ ಗೌಡಗೆ 15 ದಿನ ಹೊರರಾಜ್ಯಕ್ಕೆ ತೆರಳಲು ಅವಕಾಶ ನೀಡಿದೆ. ಇದನ್ನೂ ಓದಿ: ದರ್ಶನ್ ದಾಂಪತ್ಯಕ್ಕೆ 22 ವರ್ಷ- ಹೊಸ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ
ಕಳೆದ ಬಾರಿ ಅನಾರೋಗ್ಯದ ಕಾರಣ ಹೇಳಿ ದರ್ಶನ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹಾಜರಾಗದ್ದಕ್ಕೆ ಕೋರ್ಟ್ ದರ್ಶನ್ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಜಾಮೀನು (Bail) ಸಿಕ್ಕಿದೆ. ಜಾಮೀನು ಪಡೆದರೂ ನ್ಯಾಯಾಲಯಕ್ಕೆ (Court) ಹಾಜರಾಗಬೇಕು ಎಂಬ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಇಂದು ಆರೋಪಿಗಳು ಕೋರ್ಟ್ಗೆ ಹಾಜರಾಗಿದ್ದರು.