ದರ್ಶನ್ ಅರೆಸ್ಟ್‌ನಿಂದ ಸುಪ್ರೀಂ ಬೇಲ್ ವಿಚಾರಣೆವರೆಗೆ ಏನೇನಾಯ್ತು? ಟೈಮ್‌ಲೈನ್ ಹೀಗಿದೆ

Public TV
4 Min Read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್‌ಗೆ (Darshan) ನೀಡಿರುವ ಜಾಮೀನು ರದ್ದುಪಡಿಸಬೇಕೋ ಅಥವಾ ಮುಂದುವರಿಸಬೇಕೋ ಎಂಬುದರ ಕುರಿತು ಸುಪ್ರೀಂ ಕೋರ್ಟ್ (Supreme Court) ಇಂದು (ಗುರುವಾರ) ಮಹತ್ವದ ತೀರ್ಪು ನೀಡಲಿದೆ.

ದರ್ಶನ್, ಪವಿತ್ರಾಗೌಡ ಹಾಗೂ ಇತರೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಕಳೆದ ವರ್ಷ ಡಿ.13ರಂದು ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಅರ್ಜಿಯನ್ನು ಜು.24ರಂದು ವಿಚಾರಣೆ ನಡೆಸಿದ ನ್ಯಾ.ಜೆ.ಬಿ ಪರ್ದಿವಾಲಾ ಮತ್ತು ನ್ಯಾ.ಆರ್ ಮಹದೇವನ್ ಅವರಿದ್ದ ಪೀಠ ತೀರ್ಪು ಕಾಯ್ದಿರಿಸಿತ್ತು. ಜಾಮೀನು ರದ್ದತಿ ಮೇಲ್ಮನವಿ ತೀರ್ಪು ಇಂದು ಪ್ರಕಟಗೊಳ್ಳಲಿದೆ.

ರೇಣುಕಾಸ್ವಾಮಿ ಕೊಲೆ, ದರ್ಶನ್ ಅರೆಸ್ಟ್‌ನಿಂದ ಹಿಡಿದು ಸುಪ್ರೀಂ ಬೇಲ್ ವಿಚಾರಣೆವರೆಗೆ ಏನೇನಾಯ್ತು ಎಂಬುದರ ಕುರಿತು ಕಂಪ್ಲೀಟ್ ಟೈಮ್‌ಲೈನ್ ಈ ಕೆಳಗೆ ನೀಡಲಾಗಿದೆ.

ಜೂನ್ 8 ಶನಿವಾರ
*ಬೆಳಗ್ಗೆ 11 ಗಂಟೆ ಸುಮಾರಿಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಕಿಡ್ನಾಪ್
*ಬೆಂಗಳೂರಿನ ಆರ್‌ಆರ್ ನಗರ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ.
*ನಟ ದರ್ಶನ್, ಪವಿತ್ರಾ ಗ್ಯಾಂಗ್‌ನಿಂದ ನಡೆದಿದ್ದ ಹಲ್ಲೆ, ಕೊಲೆ

ಜೂನ್ 9 ಭಾನುವಾರ
*ಬೆಳಗ್ಗೆ 8 ಗಂಟೆಗೆ ಸುಮನಹಳ್ಳಿ ರಾಜಕಾಲುವೆ ಬಳಿ ಶವ ಪತ್ತೆ
*ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಸೆಕ್ಯೂರಿಟಿ ಗಾರ್ಡ್
*ಅಪರಿಚಿತ ಶವದ ಬಗ್ಗೆ ಸೆಕ್ಯೂರಿಟಿ ಗಾರ್ಡ್‌ನಿಂದ ದೂರು ಪಡೆದು ಪೊಲೀಸರ ತನಿಖೆ.

ಜೂನ್ 10 ಸೋಮವಾರ
*ನಾಲ್ವರು ಆರೋಪಿಗಳು ಪೊಲೀಸರಿಗೆ ಸರೆಂಡರ್.
*ರಾಘವೇಂದ್ರ, ಕೇಶವಮೂರ್ತಿ, ಕಾರ್ತಿಕ್, ನಿಖಿಲ್ ನಾಯಕ್ ಸರೆಂಡರ್
*ಬಳಿಕ ಸೋಮವಾರ ರಾತ್ರಿ ಕೊಲೆ ಕೇಸ್ ಗೆ ಮೇಜರ್ ಟ್ವಿಸ್ಟ್ ಕೊಟ್ಟ ಆರೋಪಿ ಹೇಳಿಕೆ
*ನಟ ದರ್ಶನ್ ಹಾಗೂ ಪವಿತ್ರಾಗೌಡ ಹೆಸರು ಬಾಯ್ಬಿಟ್ಟ ಆರೋಪಿಗಳು

ಜೂನ್ 11 ಮಂಗಳವಾರ
*ದರ್ಶನ್ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅಂಡ್ ಎಸಿಪಿ ಚಂದನ್ ನೇತೃತ್ವದ ತಂಡ ಮೈಸೂರಿಗೆ ದೌಡು
*ಹೋಟೇಲ್‌ನಿಂದ ದರ್ಶನ್ ವಶಕ್ಕೆ ಪಡೆದು ಕರೆತಂದ ಪೊಲೀಸರು
*ನಂತರ ಆರ್‌ಆರ್ ನಗರ ಮನೆಯಿಂದ ಪವಿತ್ರಾಗೌಡ ಕಸ್ಟಡಿಗೆ
*ಬಳಿಕ ನಟ ದರ್ಶನ್ ಹಾಗೂ ಪವಿತ್ರಾಗೌಡ ಬಂಧನ
*ಆರೋಪಿಗಳನ್ನ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು
*ಜೂನ್ 15 ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದ ಪೊಲೀಸರು.

ಜೂನ್ 15 ಶನಿವಾರ
*ಕೋರ್ಟ್‌ಗೆ ಪುನಃ ಆರೋಪಿಗಳು ಹಾಜರುಪಡಿಸಿದ ಪೊಲೀಸರು.
*ಜೂನ್ 20ರವರೆಗೆ ಕಸ್ಟಡಿಗೆ ಪಡೆದು ವಿಚಾರಣೆ.

ಜೂನ್ 20 ಗುರುವಾರ
*ಜೂನ್ 20ರಂದು ಸಂಜೆ ಮತ್ತೆ ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು
*ದರ್ಶನ್ ಸೇರಿ ನಾಲ್ವರನ್ನ ಎರಡು ದಿನ ಕಸ್ಟಡಿಗೆ ಪಡೆದ ಪೊಲೀಸರು
*ಜೂನ್ 22ರವರೆಗೆ ಪೊಲೀಸ್ ಕಸ್ಟಡಿಗೆ

ಜೂನ್ 22 ಶನಿವಾರ
*ಜೂನ್ 22ರಂದು ಎಸಿಎಂಎಂ ಕೋರ್ಟ್‌ಗೆ ದರ್ಶನ್ ಸೇರಿ ನಾಲ್ವರನ್ನ ಹಾಜರು
*ವಿಚಾರಣೆ ನಡೆಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್.
*2024 ಸೆಪ್ಟೆಂಬರ್ 3ರಂದು ಚಾರ್ಜ್ ಶೀಟ್ ಸಲ್ಲಿಕೆ
*24ನೇ ಎಸಿಎಂಎಂ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ
*ನಟ ದರ್ಶನ್, ಪವಿತ್ರಾಗೌಡ ಸೇರಿ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್
*3991 ಪುಟಗಳು, 7 ಸಂಪುಟ, 200ಕ್ಕೂ ಹೆಚ್ಚು ವಿಟ್ನೆಸ್ ಇರುವ ಚಾರ್ಜ್ ಶೀಟ್

2024 ಸೆಪ್ಟೆಂಬರ್ 21
*ಜಾಮೀನು ಕೋರಿ ದರ್ಶನ್ ಅರ್ಜಿ
*ಸಿಟಿ ಸಿವಿಲ್ ಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ

2024 ಅಕ್ಟೋಬರ್ 14
*ದರ್ಶನ್, ಪವಿತ್ರಗೌಡ ಜಾಮೀನು ಅರ್ಜಿ ವಜಾ
*57ನೇ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಜಾಮೀನು ವಜಾ
*ನಂತರ ಅನಾರೋಗ್ಯ ಕಾರಣ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ
*ರಾಜ್ಯ ಸರ್ಕಾರದ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್ ವಾದ
*ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ

2024 ಅಕ್ಟೋಬರ್ 30
*ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು
*ಅನಾರೋಗ್ಯ ನಿಮಿತ್ತ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್
*ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಸಲುವಾಗಿ ಮಧ್ಯಂತರ ಜಾಮೀನು
*ಅಕ್ಟೋಬರ್ 30 ರಂದು ಸಂಜೆ 6 ಗಂಟೆಗೆ ಬಳ್ಳಾರಿ ಜೈಲಿನಿಂದ ದರ್ಶನ್ ರಿಲೀಸ್
*131 ದಿನಗಳ ಬಳಿಕ ದರ್ಶನ್ ಜೈಲಿನಿಂದ ಬಿಡುಗಡೆ

ನವೆಂಬರ್ 1
*ಬಿಜಿಎಸ್ ಆಸ್ಪತ್ರೆಗೆ ದರ್ಶನ್ ದಾಖಲು

2024 ಡಿಸೆಂಬರ್ 13
*ದರ್ಶನ್‌ಗೆ ರೆಗ್ಯುಲರ್ ಬೇಲ್ ಮಂಜೂರು
*ಹೈಕೋರ್ಟ್‌ನಿಂದ ದರ್ಶನ್, ಪವಿತ್ರಾಗೌಡಗೆ ಜಾಮೀನು ಮಂಜೂರು

2025 ಜನವರಿ 6
*ದರ್ಶನ್ ಹಾಗೂ ಏಳು ಆರೋಪಿಗಳ ಜಾಮೀನು ರದ್ದತಿ ಕೋರಿ ಮೇಲ್ಮನವಿ

ಜನವರಿ 10
*ಸುಪ್ರೀಂಕೋರ್ಟ್‌ನಲ್ಲಿ ಕೇಸ್ ರಿಜಿಸ್ಟರ್
*ನಟ ದರ್ಶನ್, ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಪ್ರದೂಷ್, ಜಗದೀಶ್, ಅನುಕುಮಾರ್ ಜಾಮೀನು ರದ್ದತಿ ಕೋರಿ ಮೇಲ್ಮನವಿ
*ಏಳು ಆರೋಪಿಗಳ ಜಾಮೀನು ರದ್ದತಿ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್
*ನ್ಯಾ.ಜೆಬಿ ಪರ್ದಿವಾಲಾ, ನ್ಯಾ ಆರ್ ಮಹದೇವನ್ ಅವರ ಪೀಠದಲ್ಲಿ ನಡೆದ ವಿಚಾರಣೆ

ಜುಲೈ 24
*ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
*ರಾಜ್ಯ ಸರ್ಕಾರ ಪರವಾಗಿ ಸಿದ್ದಾರ್ಥ ಲೂತ್ರಾ ವಾದ
*ದರ್ಶನ್ ಪರವಾಗಿ ಸಿದ್ದಾರ್ಥ ದವೆ ವಾದ

Share This Article