ಧಾರವಾಡ| ನದಿಯಲ್ಲಿ ಕೊಚ್ಚಿ ಹೋಯ್ತು ಕಾರು- ಮರ ಏರಿದ್ದ ಚಾಲಕನ ರಕ್ಷಣೆ

Public TV
1 Min Read

ಧಾರವಾಡ: ತುಂಬಿ ಹರಿಯುತ್ತಿದ್ದ ಶಾಲ್ಮಲಾ ನದಿಗೆ (Shalmala River) ಕಾರು ಸಮೇತ ಸಿಲುಕಿದ್ದ ಚಾಲಕನನ್ನು ರಕ್ಷಿಸುವಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ. ಈ ಘಟನೆಯು ಧಾರವಾಡ (Dharawada) ಜಿಲ್ಲೆಯ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ-ಬೇಗೂರು ನಡುವೆ ಮಂಗಳವಾರ ತಡರಾತ್ರಿ ನಡೆದಿದೆ.

ಧಾರವಾಡ ತಾಲೂಕಿನ ಪುಡಕಲಕಟ್ಟಿ ಗ್ರಾಮದ ನಾಗರಾಜ ದೇಮಣ್ಣವರ ಬೇಗೂರು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ನೀರಿನ ರಭಸಕ್ಕೆ ಕಾರು ಸಮೇತ ಕೊಚ್ಚಿ ಹೋಗಿತ್ತು. ಚಾಲಕ ಅಪಾಯಕ್ಕೆ ಸಿಲುಕಿದ್ದು, ಕೊಚ್ಚಿ ಹೋಗುವ ಸಮಯದಲ್ಲಿ ಕಾರಿನಿಂದ ಆತ ಮರವೇರಿದ್ದಾನೆ. ಇದನ್ನೂ ಓದಿ: ಬೆಂಗಳೂರು ಕಟ್ಟಡ ಕುಸಿತ- ಮಾಲೀಕ, ಮಗನ ವಿರುದ್ಧ ಎಫ್‌ಐಆರ್ ದಾಖಲು

ಇದನ್ನ ಗಮನಿಸಿದ ಸ್ಥಳೀಯರು ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯುವಕನ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ತುಂಗಭದ್ರಾ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ – ಮುಳುಗಡೆ ಹಂತ ತಲುಪಿದ ಕಂಪ್ಲಿ ಸೇತುವೆ

Share This Article