ಬೆಳಗಾವಿ: ಸಹಕಾರ ಕ್ಷೇತ್ರಕ್ಕೂ ಸಹ ರೆಸಾರ್ಟ್ ರಾಜಕೀಯ ಕಾಲಿಟ್ಟಿದೆ. ಇಷ್ಟು ದಿನಗಳ ಕಾಲ ಶಾಸಕರು ರಾಜಕಾರಣದಲ್ಲಿ ರೆಸಾರ್ಟ್ ರಾಜಕೀಯ (Resort Politics) ಮಾಡ್ತಿದ್ರು. ಆದರೆ ಬೆಳಗಾವಿ (Belagavi) ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಸದ್ಯ ಮತದಾನದ ಹಕ್ಕು ಪಡೆದ ಪಿಕೆಪಿಎಸ್ ನಿರ್ದೇಶಕರಿಗೆ ಟೂರ್ ಭ್ಯಾಗ್ಯ ಒದಗಿ ಬಂದಿದೆ.
ಗೋವಾ, ಮಹಾರಾಷ್ಟ್ರ, ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳಿಗೆ ಪಿಕೆಪಿಎಸ್ ಸದಸ್ಯರು ಟೂರ್ ಹೊರಟಿದ್ದಾರೆ. ಡಿಸಿಸಿ ಬ್ಯಾಂಕ್ನ 16 ಸ್ಥಾನಗಳ ಪೈಕಿ 9 ನಿರ್ದೇಶಕರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದು, ಇನ್ನೂ 7 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನಿಪ್ಪಾಣಿ, ಹುಕ್ಕೇರಿ, ಅಥಣಿ, ರಾಯಭಾಗ, ರಾಮದುರ್ಗ, ಕಿತ್ತೂರು, ಬೈಲಹೊಂಗಲದಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್; ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ
ಜಾರಕಿಹೊಳಿ ಹಾಗೂ ಕತ್ತಿ ಸವದಿ ಬಣಗಳ ಮಧ್ಯೆ ಡಿಸಿಸಿ ಬ್ಯಾಂಕ್ ತೆಕ್ಕೆಗೆ ಪಡೆಯಲು ಜಿದ್ದಾಜಿದ್ದಿಯೂ ನಡೆದಿದೆ. ಅಡ್ಡ ಮತದಾನ, ಮತದಾರರ ಸೆಳೆಯುವ ಭೀತಿಯ ಕಾರಣ ಮತದಾರರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಅಕ್ಟೋಬರ್ 19ಕ್ಕೆ ನಡೆಯುವ ಚುನಾವಣೆಗೆ ಮತದಾನ ಮಾಡಲು ನೇರವಾಗಿ ಮತದಾರರು ಬರಲಿದ್ದಾರೆ. ಹೈಟೆಕ್ ಟಿಟಿಯಲ್ಲಿ ಬೇರೆ ಬೇರೆ ರಾಜ್ಯಗಳ ರೆಸಾರ್ಟ್ಗಳಿಗೆ ಮತದಾರರನ್ನು ಶಿಫ್ಟ್ ಮಾಡಲಾಗಿದೆ. ಮತದಾರರು ಭದ್ರತಾ ಸಿಬ್ಬಂದಿ ಕಣ್ಗಾವಲಿನಲ್ಲಿಯೇ ಇರಲಿದ್ದು, ರೆಸಾರ್ಟ್ಗೆ ತೆರಳುವ ಮತದಾರರಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.