ಗುರುವಾರ ಜೆಡಿಎಸ್‌ನಿಂದ ಪರಾಮರ್ಶೆ ಸಭೆ – ಮತ್ತೆ ಸಿನಿಮಾದತ್ತ ನಿಖಿಲ್ ಒಲವು

Public TV
1 Min Read

ಬೆಂಗಳೂರು: ವಿಧಾನಸಭೆ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಗುರುವಾರ ಜೆಡಿಎಸ್ (JDS) ಸೋಲಿನ ಪರಾಮರ್ಶೆ ಸಭೆ ನಡೆಸಲಿದೆ.

ಅರಮನೆ ಮೈದಾನದಲ್ಲಿ ಮಾಜಿ ಪ್ರಧಾನಿ ದೇವೇಗೌಡ (H.D.Deve Gowda), ಮಾಜಿ ಸಿಎಂ ಕುಮಾರಸ್ವಾಮಿ (H.D.Kumaraswamy), ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (C.M.Ibrahim) ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಹಾಲಿ ಶಾಸಕರು, ಸೋತ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ಹಾಲಿ ಮಾಜಿ ಶಾಸಕರು, ಸಂಸದರು, ತಾಲೂಕು ಅಧ್ಯಕ್ಷರುಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಸೋಲಿಗೆ ಕಾರಣಗಳೇನು, ಎಲ್ಲಿ ಪಕ್ಷಕ್ಕೆ ಹಿನ್ನಡೆ ಆಗಿದೆ ಎಂಬ ಅಂಶಗಳ ಕುರಿತು ಅವಲೋಕನವನ್ನು ನಾಯಕರು ಮಾಡಲಿದ್ದಾರೆ. ಇದನ್ನೂ ಓದಿ: ಆರ್‌ವಿ ರಸ್ತೆ, ಬೊಮ್ಮಸಂದ್ರ ಪ್ರಯಾಣಿಕರಿಗೆ ಗುಡ್ ನ್ಯೂಸ್ – ವರ್ಷಾಂತ್ಯಕ್ಕೆ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

ರಾಮನಗರದಲ್ಲಿ (Ramanagara) ಸೋಲಿನ ನಂತರ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮತ್ತೆ ಸಿನಿಮಾದತ್ತ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಮತ್ತೆ ಸಿನಿಮಾದಲ್ಲಿ ತೊಡಗಿಸಿಕೊಳ್ಳಲು ನಿಖಿಲ್ ನಿರ್ಧಾರ ಮಾಡಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ಯುವ ಘಟಕ ಅಧ್ಯಕ್ಷ ಸ್ಥಾನ ತ್ಯಜಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹೊಸಬರಿಗೆ ಅವಕಾಶ ಕೊಡುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದ್ದು, ಶೀಘ್ರವೇ ಯುವ ಘಟಕಕ್ಕೆ ಹೊಸ ಅಧ್ಯಕ್ಷರ ನೇಮಕ ಆಗುವ ಸಾಧ್ಯತೆಯಿದೆ. ಇದನ್ನೂ ಓದಿ: ಗ್ಯಾರಂಟಿ ಲಾಭ ಪಡೆಯಲು ದುಂಬಾಲು – ಬೆಂಗಳೂರಿನಲ್ಲಿ ಬಿಪಿಎಲ್ ಕಾರ್ಡ್‍ಗೆ ಫುಲ್‌ ಡಿಮ್ಯಾಂಡ್‌

Share This Article