ಮಂಗಳೂರು | ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕ ಕೂಡ ಅಪಘಾತಕ್ಕೆ ಬಲಿ!

Public TV
1 Min Read

– ಚೆನ್ನೈನಲ್ಲಿ ಸಾಫ್ಟ್‌ವೇರ್‌ ಉದ್ಯೋಗಿಯಾಗಿದ್ದ ಯುವತಿ

ಮಂಗಳೂರು: ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕ ಕೂಡ ಅಪಘಾತಕ್ಕೆ (Accident) ಬಲಿಯಾಗಿರುವ ಘಟನೆ ಮಂಗಳೂರಿನ (Mangaluru) ಪಾವಂಜೆ ಬಳಿ ನಡೆದಿದೆ.

ಹದಿನೈದು ದಿನಗಳ ಅಂತರದಲ್ಲೇ ಅಕ್ಕ – ತಮ್ಮ ಇಬ್ಬರೂ ಸಾವನ್ನಪ್ಪಿದ್ದಾರೆ. ನಗರದ ಬಂಗ್ರಕೂಳೂರು ನಿವಾಸಿಗಳಾದ ಶ್ರುತಿ ಹಾಗೂ ಸುಜಿತ್ ಮೃತಪಟ್ಟ ಅಕ್ಕ-ತಮ್ಮ. ಇದನ್ನೂ ಓದಿ: ತಾನೇ ಸಾಕಿದ್ದ ಶ್ವಾನಕ್ಕೆ ಚಿತ್ರಹಿಂಸೆ ಕೊಟ್ಟು ಬರ್ಬರವಾಗಿ ಹತ್ಯೆಗೈದ ಮಹಿಳೆ

ಏನಿದು ದುರ್ಘಟನೆ?
ತಮ್ಮ ಸುಜಿತ್ ಇದೇ ಜೂನ್ 10ರಂದು ಮೃತಪಟ್ಟಿದ್ದ. ಹಾಗಾಗಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಶೃತಿ ಚೆನ್ನೈನಿಂದ ಬಂದಿದ್ದಳು. ಬ್ಯಾಂಕ್‌ ಕೆಲಸದ ನಿಮಿತ್ತ ಪಾವಂಜೆ ಬಳಿ ಸ್ಕೂಟರ್ ನಿಲ್ಲಿಸಿ ರೈನ್ ಕೋಟ್ ಧರಿಸುತ್ತಿದ್ದರು, ತಮ್ಮ ತಂದೆ ಕೂಡ ಜೊತೆಗಿದ್ದರು. ಈ ವೇಳೆ ಹಿಂಬಂದಿಯಿಂದ ಬಂದು ಕಾರು ಗುದ್ದಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಶೃತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ತಂದೆ ಗೋಪಾಲ ಆಚಾರ್ಯ ಅವರೂ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೋಪಾಲ ಆಚಾರ್ಯರಿಗೆ ಇಬ್ಬರೇ ಮಕ್ಕಳಿದ್ದು, ಪುತ್ರನ ಸಾವು ಮಾಸುವ ಮುನ್ನವೇ ಪುತ್ರಿಯೂ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬದ ಶೋಕಸಾಗರದಲ್ಲಿ ಮುಳುಗಿದೆ. ಇದನ್ನೂ ಓದಿ: Kalaburagi | ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರಿಂದ ಕಂಡಕ್ಟರ್ ಮೇಲೆ ಹಲ್ಲೆ

Share This Article