ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಾಗುತ್ತಿದೆ ದರೋಡೆ ಕೇಸ್‌ – ಶಾ ವಿರುದ್ಧ ಕೇಜ್ರಿವಾಲ್ ಆಕ್ರೋಶ

Public TV
2 Min Read

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಭದ್ರತೆ ವಿಚಾರ ತೀವ್ರ ಚರ್ಚೆಯಾಗುತ್ತಿರುವ ಹೊತ್ತಲ್ಲೇ ಸರಣಿ ದರೋಡೆ ಪ್ರಕರಣಗಳು ವರದಿಯಾಗುತ್ತಿವೆ. ಇಂಡಿಯಾ ಗೇಟ್ ಕೂಗಳತೆ ದೂರದಲ್ಲಿರುವ ಪ್ರಗತಿ ಮೈದಾನ ಟನಲ್ ನಲ್ಲಿ (Pragati Maidan Tunnel) ನಡೆದ ದರೋಡೆ ಬಳಿಕ ಹಲವು ಲೂಟಿ ಪ್ರಕರಣಗಳು (Crime Case) ವರದಿಯಾಗುತ್ತಿವೆ.

ಮಂಗಳವಾರ ಸಂಜೆ ಉದ್ಯಮಿಯೊಬ್ಬರಿಂದ ಸುಮಾರು 4 ಲಕ್ಷ ರೂ. ಲೂಟಿ ಮಾಡಿರುವ ಘಟನೆ ಕಾಶ್ಮೀರ್ ಗೇಟ್ ಪ್ರದೇಶದಲ್ಲಿ ನಡೆದಿದೆ‌. ಈ ನಡುವೆ ಲಾಹೋರಿ ಗೇಟ್ ಪ್ರದೇಶದ ಟೆಲಿಯಾನ್ ಮಾರುಕಟ್ಟೆಯಲ್ಲಿ ಮೂವರು ವ್ಯಕ್ತಿಗಳು 5 ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದಾರೆ. ಇದನ್ನೂ ಓದಿ: ಹಾಡಹಗಲೇ ದರೋಡೆ – ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿ, ಗನ್ ತೋರ್ಸಿ ಹಣ ದೋಚಿದ ದುಷ್ಕರ್ಮಿಗಳು

ಇದಕ್ಕೂ ಮೊದಲು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Indira Gandhi International Airport) ಹೊರಗಡೆ ಕಸ್ಟಮ್ ಅಧಿಕಾರಿಗಳಂತೆ ನಟಿಸಿ ಇಬ್ಬರು ವ್ಯಕ್ತಿಗಳು ಸೌದಿ ಅರೇಬಿಯಾದಿಂದ ವಾಪಸ್ಸಾದ ಪ್ರಯಾಣಿಕನಿಂದ 4 ಲಕ್ಷ ಮೌಲ್ಯದ ವಿದೇಶಿ ನೋಟುಗಳನ್ನ ಪಡೆದು ವಂಚಿಸಿದ್ದರು. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಯಾರಿ – ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ಕೆಂಡ

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಗೋಲ್ಡಿ ಬ್ರಾರ್ ಹೆಸರಿನಲ್ಲಿ ಬೆದರಿಕೆ ಹಾಕಿ ಉದ್ಯಮಿಯಿಂದ 5 ಕೋಟಿ ಪಡೆದು ವಂಚಿಸಲಾಗಿದೆ. ಎಲ್ಲ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು ಸದ್ಯ ಪ್ರಗತಿ ಮೈದಾನ ಟನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಬಂಧಿಸಿದ್ದಾರೆ.

ಇದೇ ವಿಚಾರದಲ್ಲಿ ರಾಜಕಾರಣವೂ ಆರಂಭವಾಗಿದ್ದು ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವ ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. ನಿಮ್ಮ ಕೈಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದರೆ ನಮಗೆ ಕೊಡಿ ನಾವು ಮಾಡಿ ತೋರಿಸುತ್ತೇವೆ ಎಂದು ಸವಾಲ್‌ ಹಾಕಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್