ವೃದ್ಧ ದಂಪತಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ದರೋಡೆ

Public TV
1 Min Read

ಮಡಿಕೇರಿ: ವೃದ್ಧ ದಂಪತಿಯನ್ನು ಕೋಣೆಯಲ್ಲಿ ಕೂಡಿಹಾಕಿ ದರೋಡೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ.

ಮಾಲ್ದಾರೆಯ(ಬಾಡಗ) ತಂಗಪ್ಪಣ್ಣ ಹಾಗೂ ಜಾನಕಿ ದಂಪತಿಯ ಮನೆಗೆ 3 ಮಂದಿ ಮುಸುಕುಧಾರಿಗಳು ದಾಳಿ ಮಾಡಿದ್ದಾರೆ. ಮನೆಯ ಹಿಂಬದಿಯ ಬಾಗಿಲು ಮೂಲಕ ಒಳಗೆ ಪ್ರವೇಶಿಸಿದ ದರೋಡೆಕೋರರು, ಚಿನ್ನ ಹಾಗೂ ನಗದು ಎಲ್ಲಿಟ್ಟಿದ್ದೀರಿ ಎಂದು ಬೆದರಿಸಿ ದಂಪತಿಯನ್ನು ಮನೆಯ ಕೋಣೆಯೊಂದರಲ್ಲಿ ಕೂಡಿಹಾಕಿದರು ಎನ್ನಲಾಗಿದೆ.

ಬಳಿಕ ದರೋಡೆಕೋರರು ಮನೆಯಲ್ಲಿದ್ದ ಅಂದಾಜು 1.5 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಕೊನೆಯಲ್ಲಿ ಜಾನಕಿ ಅವರ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದಾಡಿದ್ದಾರೆ. ಪರಿಣಾಮ ಅರ್ಧ ಭಾಗ ಸರ ದರೋಡೆಕೋರರ ಕೈಸೇರಿದೆ. ಇದನ್ನೂ ಓದಿ: ಪಠ್ಯದಲ್ಲಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿತ್ತು: ಬಿಜೆಪಿ

ಘಟನಾ ಸ್ಥಳಕ್ಕೆ ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಎಂ.ಎ ಅಯ್ಯಪ್ಪ, ಡಿ.ವೈ.ಎಸ್.ಪಿ ಗಜೇಂದ್ರ ಪ್ರಸಾದ್, ಸಿ.ಐ ವೆಂಕಟೇಶ್, ಪಿ.ಎಸ್.ಐ ಮೋಹನ್ ರಾಜ್ ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: PSI ನೇಮಕಾತಿಯಲ್ಲಿ ಅಕ್ರಮ – ಫಸ್ಟ್‌ ರ‍್ಯಾಂಕ್‌ ಅಭ್ಯರ್ಥಿ ಅರೆಸ್ಟ್

Share This Article
Leave a Comment

Leave a Reply

Your email address will not be published. Required fields are marked *