ಶತಾಯುಷಿ ಶ್ರೀಗಳ ಪಾದಮುಟ್ಟಿ ನಮಸ್ಕರಿಸಿದ ಯಶ್

Public TV
1 Min Read

ತುಮಕೂರು: ರಾಕಿಂಗ್ ಸ್ಟಾರ್ ಯಶ್ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ನಟ ಯಶ್ ಶುಕ್ರವಾರ ಖಾಸಗಿ ಕಾರ್ಯಕ್ರಮ ನಿಮಿತ್ತ ತುಮಕೂರಿಗೆ ಬಂದಿದ್ದರು. ನಂತರ ಅವರು ಶ್ರೀಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಶತಾಯುಷಿ ಶಿವಕುಮಾರ ಸ್ವಾಮೀಜಿಗಳ ಪಾದಮುಟ್ಟಿ ನಮಸ್ಕರಿಸಿದ್ದು, ಅಷ್ಟೇ ಅಲ್ಲದೇ ಕೆಲ ಹೊತ್ತು ಅವರ ಮುಂದೆ ಕುಳಿತುಕೊಂಡಿದ್ದಾರೆ. ಇನ್ನು ಮಠದ ವತಿಯಿಂದ ಯಶ್ ವರಿಗೆ ಹಣ್ಣು ನೀಡಿ, ಶಾಲು ಹಾಕಿ ಗೌರವಿಸಲಾಯಿತು.

ಇತ್ತೀಚೆಗಷ್ಟೆ ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದ್ದು, ಜ್ವರ ಹಾಗೂ ಕಫ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಚೇತರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಯಶ್ ಶ್ರೀಗಳನ್ನು ಭೇಟಿಯಾಗಿದ್ದಾರೆ ಅಂತಾ ತಿಳಿದು ಬಂದಿದೆ.

ಪ್ರಸ್ತುತ ಯಶ್ ದಕ್ಷಿಣ ಭಾರತದ ಬಹುನಿರೀಕ್ಷಿತ ಕೆ.ಜಿ.ಎಫ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಿನಿಮಾ ತೆರೆಕಾಣಲಿದೆ. ಇದನ್ನು ಓದಿ: ಮಗುವಿನೊಂದಿಗಿರೋ ಯಶ್ ಫೋಟೋ ಹಾಕಿ ಪತ್ನಿ ರಾಧಿಕಾ ಹೀಗೆ ತಮಾಷೆ ಮಾಡಿದ್ರು!

Share This Article
Leave a Comment

Leave a Reply

Your email address will not be published. Required fields are marked *