ಐಟಿ ಅಧಿಕಾರಿಗಳಿಗಾಗಿ ಮುಂಬೈನಿಂದ ಬರುತ್ತಿದ್ದಾರೆ ರಾಖಿ ಬಾಯ್!

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್ ನಟರ ಮನೆಗೆ ಐಟಿ ಶಾಕ್ ನೀಡಿದೆ. ಐಟಿ ದಾಳಿ ವೇಳೆ ರಾಕಿಂಗ್ ಸ್ಟಾರ್ ಯಶ್ ಅವರು ಮನೆಯಲ್ಲಿ ಇಲ್ಲದ ಕಾರಣ ತಕ್ಷಣ ಮನೆಗೆ ಬರುವಂತೆ ಐಟಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಯಶ್ ಮನೆಯಲ್ಲಿ ಇರಲಿಲ್ಲ. ಹಾಗಾಗಿ ಅಧಿಕಾರಿಗಳು ಯಶ್ ಅವರಿಗೆ ತಕ್ಷಣ ಮನೆಗೆ ಬರುವಂತೆ ಸೂಚನೆ ನೀಡಿದ್ದಾರೆ. ಯಶ್ ಮುಂಬೈಯಲ್ಲಿದ್ದು, ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿಗೆ ಬರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ಮುಂಜಾನೆಯಿಂದ ಐಟಿ ಅಧಿಕಾರಿಗಳು ಹೊಸಕೆರೆಹಳ್ಳಿಯಲ್ಲಿರುವ ಯಶ್ ನಿವಾಸದಲ್ಲಿ ತಾಯಿ ಬಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ವೇಳೆ ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಯಶ್ ತಾಯಿ ಗೊತ್ತಿಲ್ಲ ಎನ್ನುವ ಮಾತು ಬಿಟ್ಟರೆ ಬೇರೆ ಏನೂ ಉತ್ತರ ನೀಡುತ್ತಿಲ್ಲ ಎನ್ನುವ ವಿಚಾರ ಮೂಲಗಳಿಂದ ಸಿಕ್ಕಿದೆ. ಅಲ್ಲದೇ ಯಶ್ ಅವರ ಸಹೋದರಿಯನ್ನು ಪ್ರಶ್ನಿಸಿದ್ದರೆ, ನಾನು ಬೇರೆ ಕಡೆ ಇರುವುದು ಅವರ ವ್ಯವಹಾರ ನನಗೆ ಗೊತ್ತಿಲ್ಲ ಎಂದು ಉತ್ತರಿಸಿದ್ದಾರೆ.

ಯಶ್ ಪತ್ನಿ, ನಟಿ ರಾಧಿಕಾ ಪಂಡಿತ್ ಅವರ ಮಲ್ಲೇಶ್ವರಂನಲ್ಲಿರುವ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಧಿಕಾ ಮನೆಯಲ್ಲಿ ಒಟ್ಟು ಆರು ಜನ ಐಟಿ ಅಧಿಕಾರಿಗಳಿದ್ದು ತಂದೆ- ತಾಯಿ ಹೆಸರಿನಲ್ಲಿರುವ ಆಸ್ತಿ ಪತ್ರ ಕಲೆ ಹಾಕುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *