ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್

Public TV
1 Min Read

ಧಾರವಾಡ: ರೌಡಿಶೀಟರ್‌ನೊಬ್ಬ ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.

ಲಕ್ಷ್ಮೀ ಎಂಬವರ ಮೇಲೆ 4 ಜನರ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಮನೆ ಖಾಲಿ ಮಾಡುವ ವಿಚಾರಕ್ಕೆ ಅಪಾರ್ಟ್ಮೆಂಟ್‌ಗೆ ನುಗ್ಗಿ ಮಹಿಳೆ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಬಾಲಕೃಷ್ಣ ನಾಯಕ, ಶಕ್ತಿರಾಜ ದಾಂಡೇಲಿ, ರಾಹುಲ್, ಹಾಗೂ ಇನ್ನೋರ್ವನಿಂದ ಈ ಹಲ್ಲೆ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆಗೈದ ಮಹಿಳೆ ಅರೆಸ್ಟ್

ಲಕ್ಷ್ಮೀಯವರು ಅಪಾರ್ಟ್ಮೆಂಟ್‌ ಖರೀದಿ ಮಾಡಿ ಮಾಲೀಕನಿಗೆ ಹಣ ನೀಡಿರಲಿಲ್ಲ. ಹಣ ನೀಡದ ಹಿನ್ನೆಲೆ ಮಾಲೀಕನಿಂದ ಕೋರ್ಟ್‍ಗೆ ದೂರು ದಾಖಲಾಗಿತ್ತು. ಕೋರ್ಟ್‍ನಲ್ಲಿ ಕೇಸ್ ಇರುವಾಗಲೇ ನಾಲ್ವರಿಂದ ಅಪಾರ್ಟ್ಮೆಂಟ್‌ನಲ್ಲಿದ್ದ ಮಹಿಳೆ ಮೇಲೆ ದಾಳಿ ನಡೆದಿದೆ. ಇದನ್ನೂ ಓದಿ: ನೆಟ್ಟಿಗರಿಂದ ಟ್ರೋಲ್ ಆಯ್ತು ಎಸ್‍ಆರ್‌ಹೆಚ್ ಹೊಸ ಜೆರ್ಸಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಲ್ಲೆ ನಡೆಸಿ ದೈಹಿಕ ಹಿಂಸೆ ನೀಡಿದ್ದಾರೆಂದು ಕೇಸ್ ದಾಖಲಾಗಿದೆ. ಮನೆ ಖಾಲಿ ಮಾಡು ಅಂತ ಹೇಳಿದ್ದಲ್ಲದೆ, ಮೈಮೇಲಿದ್ದ ಬಂಗಾರವನ್ನ ತೆಗೆದುಕೊಂಡು ಹೋಗಿದ್ದಾರೆಂದು ಆರೋಪಿಸಿದ್ದಾರೆ.

ಈ ಹಿನ್ನೆಲೆ ನೊಂದ ಮಹಿಳೆಯು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *