ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

Public TV
1 Min Read

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ಹಲಸೂರು ಬಳಿಯ ವಾರ್ ಮೆಮೋರಿಯಲ್ ಸರ್ಕಲ್‌ನಲ್ಲಿ ನಡೆದಿದೆ.

ಶಿವಕುಮಾರ್ @ ಬಿಕ್ಲು ಶಿವ (40) ಹತ್ಯೆಯಾದ ರೌಡಿಶೀಟರ್. ಭಾರತೀನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಭಾರತೀನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಮನೆ ಹೊರಗಡೆ ನಿಂತಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮಾರಕಾಸ್ತçಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಕಾರಿನಲ್ಲಿ ಬಂದ 4-5 ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.

ಸ್ಥಳಕ್ಕೆ ಭಾರತೀನಗರ ಪೊಲೀಸರು, ಡಿಸಿಪಿ ಡಿ.ದೇವರಾಜ, ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

Share This Article