ಬೆಂಗ್ಳೂರಲ್ಲಿ ಮತ್ತೆ ರೌಡಿಗಳ ಅಟ್ಟಹಾಸ – ಫಿಲ್ಮಿ ಸ್ಟೈಲ್‍ನಲ್ಲಿ ಅಟ್ಟಾಡಿಸಿ ರೌಡಿಶೀಟರ್‌ಗೆ ಗುಂಡು!

Public TV
1 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪಾತಕಿಗಳ ಅಟ್ಟಹಾಸ ಜೋರಾಗಿದ್ದು, ದುಷ್ಕರ್ಮಿಗಳು ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿರುವ ಘಟನೆ ನಗರದ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರೌಡಿಶೀಟರ್ ಚಟ್ನಿ ಸಲೀಂ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದಾರೆ. ದುಷ್ಕರ್ಮಿಗಳು ಸಿನಿಮಾ ಶೈಲಿಯಲ್ಲಿ ಕೆ.ಜಿ. ಹಳ್ಳಿ ರೌಡಿಶೀಟರ್ ಚಟ್ನಿ ಸಲೀಂ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದಾರೆ. ರೌಡಿ ಸಲೀಂನನ್ನ 50 ಮೀಟರ್  ನಷ್ಟು ದೂರು ಅಟ್ಟಾಡಿಸಿಕೊಂಡು ಹೋದ ದುಷ್ಕರ್ಮಿಗಳು ಸುಮಾರು ಎಂಟು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಪರಮೇಶ್ ಹೇಳಿದ್ದಾರೆ.

ಕೊಲೆ ಪ್ರಕರಣದ ಆರೋಪಿ ಬೋಡಾ ವಸೀಂ

ರೌಡಿಶೀಟರ್ ಚಟ್ನಿ ಸಲೀಂ ಸೋಮವಾರ ರಾತ್ರಿ 11 ಗಂಟೆಯ ಹೊತ್ತಲ್ಲಿ ಗೆಳೆಯ ಜಾಫರ್ ನೊಂದಿಗೆ ಮಾತಾಡುತ್ತಿದ್ದನು. ಈ ವೇಳೆ ಏಕಾಏಕಿ ಎರಡು ಬೈಕ್‍ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಥೇಟ್ ಸಿನಿಮಾ ಸ್ಟೈಲ್‍ ನಲ್ಲಿ ಅಡ್ಡಾದಿಡ್ಡಿ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ರೌಡಿ ಸಲೀಂಗೆ ಹೊಟ್ಟೆ, ಎದೆ, ಕೈಗೆ ಗುಂಡು ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೂರ್ವ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ತಿಳಿಸಿದ್ದಾರೆ.

ಚಟ್ನಿಯಿಂದ ವಂಚನೆಗೊಳಗಾದವರೇ ಈ ಫೈರಿಂಗ್ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಇತ್ತ ಪೊಲೀಸರ ಗನ್ನು ಕೂಡ ಸೌಂಡ್ ಮಾಡಿದೆ. ಬ್ಯಾಟರಾಯನಪುರದ ಜಭಿವುಲ್ಲಾ ಕೊಲೆ ಪ್ರಕರಣದ ಆರೋಪಿ ಬೋಡಾ ವಸೀಂನನ್ನ ಉಲ್ಲಾಳ ಬಳಿ ಬಂಧಿಸಲು ಹೋಗಿದ್ದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಪೇದೆಯೊಬ್ಬರಿಗೆ ಗಾಯಗಳಾಗಿವೆ ಎಂದು ಉತ್ತರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೇಳಿದ್ದಾರೆ.

ಸದ್ಯ ಆರೋಪಿಯನ್ನ ವಿಕ್ಟೋರಿಯೋ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪೂರ್ಣವಾದ ಬಳಿಕ ಪೊಲೀಸರು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *