ಊಟ ಮಾಡ್ತಿದ್ದಾಗ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‍ನ ಬರ್ಬರ ಹತ್ಯೆ

Public TV
1 Min Read

ಬೆಂಗಳೂರು: ಊಟ ಮಾಡುತ್ತಿದ್ದ ವೇಳೆಯಲ್ಲೇ ದುಷ್ಕರ್ಮಿಗಳು ಬಂದು ರೌಡಿಶೀಟರೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ನಡೆದಿದೆ.

ರಂಜಿತ್(30) ಕೊಲೆಯಾದ ರೌಡಿ ಶೀಟರ್. ಈ ಘಟನೆ ನಿನ್ನೆ ತಡರಾತ್ರಿ ಸುಮಾರು 12.30ರ ವೇಳೆಯಲ್ಲಿ ಫ್ರೇಜರ್ ಟೌನ್ ಬಳಿಯ ಗೋಶಾಲೆಯಲ್ಲಿ ನಡೆದಿದೆ.

ಫ್ರೇಜರ್ ಟೌನ್‍ನ ರೌಡಿ ಶೀಟರ್ ರಂಜಿತ್ ಬುಧವಾರ ರಾತ್ರಿ ಬೆಂಗಳೂರಿನ ಪುಲಕೇಶಿನಗರ ವ್ಯಾಪ್ತಿಯ ಗೋಶಾಲೆಯಲ್ಲಿ ಊಟಕ್ಕೆ ಕುಳಿತು ಮದ್ಯಪಾನ ಮಾಡುತ್ತಿದ್ದ. ಈ ವೇಳೆ ದುಷ್ಕರ್ಮಿಗಳು ಬಂದು ಏಕಾಏಕಿ ರಂಜಿತ್ ಮೇಲೆ ಮಾರಕಾಸ್ತ್ರಗಳಿಂದ ಇರಿದಿದ್ದಾರೆ. ಪರಿಣಾಮ ವಿಪರೀತ ರಕ್ತಸ್ತಾವವಾಗಿ ರಂಜಿತ್ ಗೋವುಗಳ ನಡುವೆ ಪ್ರಾಣಬಿಟ್ಟಿದ್ದಾನೆ.

ಈ ಹಿಂದೆ ಈತನ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣ ಸೇರಿದಂತೆ ಫ್ರೇಜರ್ ಟೌನ್ ಪೊಲೀಸ್ ಠಾಣೆಯಲ್ಲಿಯೂ ಕೆಲ ಕೇಸ್ ದಾಖಲಾಗಿದ್ದವು. ಸದ್ಯ ಫ್ರೇಜರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *