ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು – ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ

1 Min Read

ಮಂಗಳೂರು: ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ನೆತ್ತರು ಹರಿದಿದೆ. ಮಂಗಳೂರು (Mangaluru) ಹೊರವಲಯದ ತೊಕ್ಕೊಟ್ಟು (Thokottu) ಫೈಓವರ್ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ @ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಶೀಟರ್. ಇದನ್ನೂ ಓದಿ: ಮೇ 31 ರಂದು ಬೆಂಗಳೂರಲ್ಲೇ ಐಪಿಎಲ್‌ ಫೈನಲ್‌ – 2ನೇ ಹಂತದ ವೇಳಾಪಟ್ಟಿ ರಿಲೀಸ್‌

ಇಂದು (ಮಾ.27) ಬೆಳ್ಳಂಬೆಳ್ಳಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಆರೋಪಿಗಳು ಕಾರಿನಲ್ಲಿ ಬಂದು ಹಿಬ್ಬಂದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ರೌಡಿಶೀಟರ್ ರಸ್ತೆಗೆ ಬಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಘಟನೆಗೆ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′

Share This Article