ಕೊರೊನಾ ವಿರುದ್ಧದ ಹೋರಾಟಕ್ಕೆ 15 ಸಾವಿರ ಕೋಟಿಯ ಪ್ಯಾಕೇಜ್

Public TV
1 Min Read

ನವದೆಹಲಿ: ಕೊರೊನಾ ಮಾಹಾಮಾರಿ ವಿರುದ್ಧದ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ 15 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಗಳು, ಇಂದು ಮಧ್ಯರಾತ್ರಿ 12 ಗಂಟೆಯಿಂದಲೇ ಭಾರತ ಸಂಪೂರ್ಣ ಲಾಕ್‍ಡೌನ್ ಮಾಡಲಾಗುವುದು ಎಂದು ತಿಳಿಸಿದರು. ಮುಂದಿನ 21 ದಿನಗಳ ಮನೆಯಲ್ಲಿ ಲಕ್ಷ್ಮಣ ರೇಖೆ ಹಾಕಿಕೊಂಡು ಹೊರಗೆ ಬರಬೇಡಿ. 21 ದಿನದ ಈ ಯುದ್ಧದಲ್ಲಿ ನಾವು ಯಶಸ್ವಿಯಾಗದಿದ್ದರೆ, ದೇಶ 21 ವರ್ಷ ಹಿಂದಕ್ಕೆ ಹೋಗಲಿದೆ ಎಂದು ಎಚ್ಚರಿಸಿದರು.

ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ 15 ಸಾವಿರ ಕೋಟಿ ರೂ. ಪ್ಯಾಕೇಜ್ ನೀಡಲಾಗಿದೆ. ಕೊರೊನಾಗೆ ಸಂಬಂಧಿಸಿದ ವೈದ್ಯಕೀಯ ಸಲಕರಣೆಗಳು, ವೈಯಕ್ತಿಯ ಸಂರಕ್ಷಣಾ ಸಲಕರಣೆಗಳು ((Personal protective Equipment)) ವೆಂಟಿಲೇಟರ್, ಔಷಧಿಗಳು, ಐಸೋಲೇಶನ್ ಬೆಡ್, ಐಸಿಯು ಬೆಡ್ ಮತ್ತು ಚಿಕಿತ್ಸೆಗೆ ಬೇಕಾದ ಅವಶ್ಯಕ ವಸ್ತುಗಳಿಗಾಗಿ ಈ ನಿಧಿಯ ಬಳಕೆಯಾಗಲಿದೆ ಎಂದು ಪ್ರಧಾನಿಗಳು ತಿಳಿಸಿದರು.

ನಿಮ್ಮ ಮೊದಲ ಪ್ರಾಥಮಿಕ ಆದ್ಯತೆ ಸ್ವಸ್ಥ ಆರೋಗ್ಯ ಸೇವೆಗೆ ನೀಡಬೇಕೆಂದು ರಾಜ್ಯ ಸರ್ಕಾರಗಳಿಗೂ ಮನವಿ ಮಾಡಿಕೊಂಡಿದ್ದೇನೆ. ಇಂತಹ ಸಂದರ್ಭಗಳಲ್ಲಿ ಗೊತ್ತಿದ್ದೋ, ಗೊತ್ತಿರದೆಯೂ ಗೊಂದಲ ಉಂಟು ಮಾಡುವ ಸುದ್ದಿಗಳು ಹರಿದಾಡುತ್ತಿರುತ್ತೇವೆ. ಅವುಗಳತ್ತ ಗಮನ ನೀಡದೇ ನೀವೇ ಹಾಕಿಕೊಂಡ ಲಕ್ಷ್ಮಣ ರೇಖೆ ದಾಟಿ ಬರಬೇಡಿ ಎಂದು ಮನವಿ ಮಾಡಿಕೊಂಡರು.

Share This Article
Leave a Comment

Leave a Reply

Your email address will not be published. Required fields are marked *