ಪ್ರತಿ ಕ್ಷೇತ್ರಕ್ಕೆ 26 ಕೋಟಿ ಅನುದಾನ – ಕೈ ಶಾಸಕರಿಗೆ ಸಿಎಂ ಭರವಸೆ

Public TV
1 Min Read

ಬೆಳಗಾವಿ: ನಮ್ಮದೇ ಸರ್ಕಾರ ಇದ್ದರೂ ನಮಗೆ ಅನುದಾನ (Grant) ಸಿಗುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದ ಕಾಂಗ್ರೆಸ್‌ ಶಾಸಕರಿಗೆ (Congress MLA’s) ಸಿಎಂ ಸಿದ್ದರಾಮಯ್ಯ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಕಾಂಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ಬಗ್ಗೆ ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ.

ಅನುದಾನ ಕೊರತೆ ನೀಗಿಸಲು ಒಟ್ಟು 6 ಸಾವಿರ ಕೋಟಿ ರೂ. ಬಿಡುಗಡೆ ಸಂಬಂಧ ಘೋಷಣೆ ಮಾಡುತ್ತೇನೆ. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂ., ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ 2 ಸಾವಿರ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊರಗುತ್ತಿಗೆ ಚಾಲಕನ ಲಂಚಾವತಾರದ ವಿಡಿಯೋ ವೈರಲ್ ಕೇಸ್‌ – ಪನ್ನಗ ಏಜೆನ್ಸಿ ವಿರುದ್ಧ KSRTC ನೋಟಿಸ್!

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ದೃಷ್ಟಿಯಿಂದ ಎರಡು ಇಲಾಖೆಯಿಂದ ಒಟ್ಟು 6 ಸಾವಿರ ರೂ. ಹಣವನ್ನು ಬಿಡುಗಡೆ ಮಾಡಲಾಗುವುದು. ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಹಣ ಒಂದೊಂದು ಕ್ಷೇತ್ರಕ್ಕೆ ಸಿಗಲಿದೆ. ಯಾರು ಬೇಸರ ಮಾಡಿಕೊಳ್ಳಬೇಡಿ ಎಂದು ಸಿಎಂ ಭರವಸೆ ನೀಡಿದ್ದಾರೆ.

 

Share This Article