ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಹಣ ಸಾಗಣೆ; 32.50 ಲಕ್ಷ ಹಣ ಜಪ್ತಿ

1 Min Read

ಬಾಗಲಕೋಟೆ: ಉಪಚುನಾವಣೆ (Bypoll) ನೀತಿ ಸಂಹಿತೆ ಉಲ್ಲಂಘಿಸಿ ಹಣ ಸಾಗಾಟ ಮಾಡುತ್ತಿದ್ದ ವಾಹನ ಅಡ್ಡಗಟ್ಟಿ 32.50 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣವನ್ನು ಹೊನ್ನಾಕಟ್ಟಿ ಚೆಕ್‌ಪೋಸ್ಟ್‌ನಲ್ಲಿ ಸೀಜ್‌ ಮಾಡಲಾಗಿದೆ. Ka 36 p 3991 ನಂಬರಿನ ಮಾರುತಿ ಎರ್ಟಿಗಾ ಕಾರಲ್ಲಿ ಹಣ ಸಾಗಿಸಲಾಗುತ್ತಿತ್ತು. ಎಸ್‌ಎಸ್‌ಟಿ ತಂಡದಿಂದ ವಾಹನ ತಪಾಸಣೆ ವೇಳೆ ಹಣ ಪತ್ತೆಯಾಗಿತ್ತು. ಇದನ್ನೂ ಓದಿ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಏ.9 ರಂದು ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್‌ ಶಾಸಕ ಹೆಚ್‌.ವೈ.ಮೇಟಿ ನಿಧನರಾಗಿದ್ದಕ್ಕೆ ಬಾಗಲಕೋಟೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲಾಗಿದೆ. ಬಿಜೆಪಿಯು ವೀರಣ್ಣ ಚರಂತಿಮಠ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕಾಂಗ್ರೆಸ್‌ನಿಂದ ಯಾರು ಕಣಕ್ಕಿಳಿಯುತ್ತಾರೆಂಬುದು ಕುತೂಹಲ ಮೂಡಿಸಿದೆ.

Share This Article