ಕಾರಲ್ಲಿ ಕುಳಿತಿದ್ದಾಗಲೇ RSS ಮುಖಂಡ ಹೃದಯಾಘಾತದಿಂದ ಸಾವು

Public TV
1 Min Read

ಬಾಗಲಕೋಟೆ: ಕಾರಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ (Heart Attack) ಜಿಲ್ಲಾ ಆರ್‌ಎಸ್‌ಎಸ್ ಮುಖಂಡರೋರ್ವರು (RSS Leader) ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಲೋಕಾಪುರ ಪಟ್ಟಣದಲ್ಲಿ ನಡೆದಿದೆ.

ಸಿದ್ದು ಚಿಕ್ಕದಾನಿ (೪೫) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಮೃತ ಆರ್‌ಎಸ್‌ಎಸ್ ಮುಖಂಡ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳ ನಗರದ ನಿವಾಸಿಯಾಗಿದ್ದು, ನಿನ್ನೆ ರಾತ್ರಿ ಕಾರಿಗೆ ಡೀಸೆಲ್ ಹಾಕಿಸಿಕೊಂಡು, ಬಂಕ್‌ನಿಂದ ಹೊರಡಲು ಕಾರು ಸ್ಟಾರ್ಟ್ ಮಾಡಿದ್ದರು. ಸ್ಟಾರ್ಟ್ ಆದ ಕಾರು ಸ್ವಲ್ಪ ಮುಂದೆ ಹೋಗಿ ಪೆಟ್ರೋಲ್ ಬಂಕ್ ಆವರಣದಲ್ಲೇ ನಿಂತಿದೆ.

ಇಡೀ ರಾತ್ರಿ ಪೆಟ್ರೋಲ್ ಬಂಕ್ ಆವರಣದಲ್ಲೇ ಕಾರು ಇದ್ದಿದ್ದನ್ನು ಗಮನಿಸಿದ ಬಂಕ್ ಸಿಬ್ಬಂದಿ ಕಾರಿನ ಬಳಿ ಬಂದು, ಬಾಗಿಲು ತೆರೆದು ಪರಿಶೀಲಿಸಿದ್ದಾರೆ. ಈ ವೇಳೆ ಸಿದ್ದು ಚಿಕ್ಕದಾನಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಹಾರಾಣಿ ಕಾಲೇಜು ಆವರಣದಲ್ಲಿ ಅಪಘಾತ – ವಿದ್ಯಾರ್ಥಿಗಳಿಗೆ ಪ್ರೊಫೆಸರ್ ಕಾರು ಡಿಕ್ಕಿ

ಸ್ಥಳಕ್ಕೆ ಆಗಮಿಸಿದ ಮುಧೋಳ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ನಟ ನಾಗಭೂಷಣ್ ಕಾರು ಅಪಘಾತ: ಪೊಲೀಸರ ಕೈ ಸೇರಿದ ಮತ್ತೊಂದು ವರದಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್