ಅಯೋಧ್ಯೆ ರಾಮಲಲ್ಲಾನ ಸನ್ನಿಧಾನಕ್ಕೆ ತೆರಳಿ ಕೊನೆಯುಸಿರೆಳೆದ ಆರ್‌ಎಸ್‌ಎಸ್‌ ಕಾರ್ಯಕರ್ತ

Public TV
1 Min Read

ಉಡುಪಿ: ಇಲ್ಲಿನ ಹಿರಿಯ ಆರ್‌ಎಸ್‌ಎಸ್‌ (RSS) ಕಾರ್ಯಕರ್ತರೊಬ್ಬರು ಅಯೋಧ್ಯೆ ರಾಮಮಂದಿರದ (Ram Mandir) ರಾಮಲಲ್ಲಾನ ಸನ್ನಿಧಾನಕ್ಕೆ ತೆರಳಿ ಕೊನೆಯುಸಿರೆಳೆದಿದ್ದಾರೆ.

ಉಡುಪಿಯ (Udupi) ಆರ್‌ಎಸ್‌ಎಸ್‌ ಕಾರ್ಯಕರ್ತ ಪಾಂಡುರಂಗ ಶಾನುಭೋಗ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ದುಡಿದು ನಿವೃತ್ತರಾಗಿದ್ದರು. ಇದನ್ನೂ ಓದಿ: ರಾಮಮಂದಿರ ಮುಂದಿನ ತಲೆಮಾರಿಗೆ ಹೆಮ್ಮೆಯ ಸಂಕೇತ: ಮೋದಿ

ರಾಮಲಲ್ಲಾನ (Ram Lalla) ಮಂದಿರಕ್ಕೆ (ರಾಮಮಂದಿರ) ಹೋಗಬೇಕೆಂದು ಅಯೋಧ್ಯೆಗೆ (Ayodhya) ತೆರಳಿದ್ದರು. ಬೆಳಗ್ಗೆ ರಾಮಲಲ್ಲಾನಿಗೆ ಕೈಮುಗಿದು ಧನ್ಯತೆ ವ್ಯಕ್ತಪಡಿಸಿದ್ದರು. ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ಪ್ರಸಾದ ಪಡೆದಿದ್ದರು. ಅಪರಾಹ್ನದ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವ ವೇಳೆ ಹೃದಯಘಾತವಾಗಿ ಮೃತಪಟ್ಟಿದ್ದಾರೆ.

ಪಾಂಡುರಂಗ ಶಾನುಭೋಗ್‌ ಅವರು ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತ. ದೃಷ್ಟಿ ಇಲ್ಲದಿದ್ದರೂ ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ರಾಜರಾಮ ‘ದರ್ಬಾರ್’ ಈ ವರ್ಷದ ಅಂತ್ಯದಲ್ಲಿ ಪೂರ್ಣ

Share This Article