ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ- ಭಾರತದ ನಿಲುವಿನಿಂದ ಬೇಸರವಾಗಿದೆ: ಯುಕೆ ಸಚಿವೆ

Public TV
1 Min Read

ಲಂಡನ್: ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ವಿಚಾರವಾಗಿ ಭಾರತ ತಳೆದಿರುವ ನಿಲುವಿನಿಂದ ತುಂಬಾ ನಿರಾಶೆಯಾಗಿದೆ ಎಂದು ಯುಕೆ ಸಚಿವೆ ಅನ್ನಿ-ಮೇರಿ ಟ್ರೆವೆಲಿಯನ್‌ ಹೇಳಿದ್ದಾರೆ.

ಈ ನಿಲುವಿನಿಂದಾಗಿ ಭಾರತ ಮತ್ತು ಯುಕೆ ನಡುವಿನ ವ್ಯಾಪಾರದ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಭಾರತದ ನಿಲುವಿನಿಂದ ನಾವು ತುಂಬಾ ನಿರಾಶೆಗೊಂಡಿದ್ದೇವೆ. ಆದರೆ ನಾವು ಭಾರತೀಯ ಪಾಲುದಾರರೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕೀವ್ ರಕ್ಷಣೆಗಾಗಿ ರಾಕೆಟ್ ಬಿಟ್ಟು ಗನ್ ಹಿಡಿದು ಹೋರಾಟಕ್ಕೆ ಮುಂದಾದ ಟೆನ್ನಿಸ್ ಆಟಗಾರ

ಭಾರತವು ಯುಕೆಗೆ ಪ್ರಮುಖ ವ್ಯಾಪಾರ ಪಾಲುದಾರ. ಭವಿಷ್ಯದಲ್ಲಿ ಪುಟಿನ್ ಈ ಯುದ್ಧಕ್ಕೆ ಧನಸಹಾಯ ನೀಡಲು ಸಾಧ್ಯವಿಲ್ಲ. ಹೀಗಾಗಿ ನಾವು ಪ್ರಪಂಚದಾದ್ಯಂತದ ದೇಶಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

ಚೀನಾ ಕೂಡ ಈ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕಾಗಿದೆ. ಇದು ಯುಎನ್‌ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರ. ಭಾರತ ಖಾಯಂ ರಹಿತ ಸದಸ್ಯ ರಾಷ್ಟ್ರ. ರಷ್ಯಾ ವಿಚಾರವಾಗಿ ನಾವು ರಾಜತಾಂತ್ರಿಕ ಒತ್ತಡವನ್ನು ವಿಸ್ತರಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆ ಕೋರ್ಟ್‌ನಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತದ ನ್ಯಾಯಾಧೀಶ

ಭಾರತ ಮತ್ತು ಚೀನಾ ರಷ್ಯಾದೊಂದಿಗೆ ನಿಕಟ ಸಂಬಂಧವನ್ನು ಹೊಂದಿವೆ. ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣದ ವಿರುದ್ಧ ಅಂಗೀಕರಿಸಿದ ಯಾವುದೇ ನಿರ್ಣಯದಿಂದ ಉಭಯ ದೇಶಗಳು ದೂರ ಉಳಿದಿವೆ.

Share This Article
Leave a Comment

Leave a Reply

Your email address will not be published. Required fields are marked *