ಉಕ್ರೇನ್ ನ್ಯೂಕ್ಲಿಯರ್ ಘಟಕದ ಮೇಲೆ ರಾಕೆಟ್ ದಾಳಿ, 14 ಮಂದಿ ದುರ್ಮರಣ – ಭಾರತಕ್ಕೂ ಆತಂಕ

Public TV
1 Min Read

ಕೈವ್: ಉಕ್ರೇನಿನ ಝಪೋರಿಝ್ಯಾ ಪರಮಾಣು ವಿದ್ಯುತ್ ಸ್ಥಾವರದ ಸಮೀಪವೇ ರಷ್ಯಾ ರಾಕೆಟ್ ದಾಳಿ ನಡೆಸಿದ್ದು, 14 ಜೀವಗಳು ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ರಷ್ಯಾ ಮೇಲಿನ ನಿಯಂತ್ರಣವು ಇತರ ದೇಶಗಳಿಗೂ ಅಪಾಯವನ್ನುಂಟುಮಾಡುತ್ತವೆ ಎಂದು G7 ರಾಷ್ಟ್ರಗಳು ಎಚ್ಚರಿಸಿವೆ.

ರಷ್ಯಾ-ಉಕ್ರೇನ್ ದಾಳಿ ನಡೆಸುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇದು ಜನರ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹಾಗಾಗಿ ಉಭಯ ದೇಶಗಳು ಪರಮಾಣು ಘಟಕದ ಸುರಕ್ಷತೆ ಹಾಗೂ ಭದ್ರತೆಗೆ ಗಮನ ನೀಡಬೇಕು ಎಂದು ಕರೆ ನೀಡಿದೆ. ಇದನ್ನೂ ಓದಿ: ಮನೆ ಬಾಡಿಗೆದಾರರಿಗೆ ಶಾಕ್ – ಹೊಸ ನಿಯಮಗಳ ಪ್ರಕಾರ ಶೇ.18 ರಷ್ಟು ತೆರಿಗೆ ಬರೆ

ಈ ಸಂಬಂಧ ಚರ್ಚೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿನ್ನೆಯಷ್ಟೇ ತುರ್ತು ಸಭೆ ಕರೆದಿತ್ತು. ಈ ವೇಳೆ ವಿಶ್ವಸಂಸ್ಥೆಯು ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಂಬೋಜ್, ಪರಮಾಣು ಘಟಕದ ಸುರಕ್ಷತೆ ಮತ್ತು ಭದ್ರತೆ ಉದ್ದೇಶದಿಂದ ಘಟಕದ ಸುತ್ತ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.

ಉಭಯ ದೇಶಗಳ ದಾಳಿಯಿಂದ ಉಂಟಾಗುವ ಯಾವುದೇ ಹಾನಿಯು ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಅಭ್ಯರ್ಥಿ ನಿತೀಶ್? – ದೂರವಾಣಿ ಕರೆಗಳ ಬಗ್ಗೆ ಸಿಎಂ ಹೇಳಿದ್ದೇನು?

ರಷ್ಯಾ ರಾಕೆಟ್ ದಾಳಿಯಿಂದ 14 ಮಂದಿ ದುರ್ಮರಣಕ್ಕೀಡಾಗಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಐವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಉದ್ವಿಗ್ನತೆಯು 1986ರ ಸೋವಿಯತ್ ಉಕ್ರೇನ್‌ನಲ್ಲಿ ನಡೆದ ಭೀರಕ ಪರಮಾಣು ದುರಂತದ ನೆನಪುಗಳನ್ನು ಪುನರುಜ್ಜೀವನಗೊಳಿಸಿದೆ. ಸೋವಿಯತ್‌ನಲ್ಲಿ ನಡೆದಿದ್ದ ಶೆಲ್ ದಾಳಿ ನೂರಾರು ಜನರನ್ನು ಕೊಂದಿತ್ತು. ಯುರೂಪ್‌ನ ಅನೇಕ ಭಾಗಗಳಲ್ಲಿ ವಿಕಿರಣದ ಮಾಲಿನ್ಯವನ್ನುಂಟುಮಾಡಿತ್ತು ಎಂದು ವರದಿಯಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *