ಅಪ್ಪ-ಅಮ್ಮ ಬಳಿ ಸುಳ್ಳು ಹೇಳಿದ್ದೆವು- ಉಕ್ರೇನ್ ಅನುಭವ ಹಂಚಿಕೊಂಡ ವಿದ್ಯಾರ್ಥಿನಿ

Public TV
1 Min Read

ನವದೆಹಲಿ: ಉಕ್ರೇನ್ ನಲ್ಲಿ ರಷ್ಯಾ ಸೈನಿಕರ ಆಕ್ರಮಣ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಉಕ್ರೇನ್ ನಲ್ಲಿ ನೆಲೆಸಿದ್ದ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರುವಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಹಲವಾರು ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರಲಾಗಿದೆ. ಹೀಗೆ ಬಂದಿರುವ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ತಾವು ಎದುರಿಸಿದ ಕಷ್ಟಗಳನ್ನು ಎಳೆಎಳೆಯಾಗಿ ಬಿಚ್ಚಿಡುತ್ತಿದ್ದಾರೆ.

ವಿದ್ಯಾರ್ಥಿನಿಯೊಬ್ಬಳು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಉಕ್ರೇನ್ ಕರಾಳತೆಯನ್ನು ಬಿಚ್ಚಿಟ್ಟಿದ್ದಾಳೆ. ಅಪ್ಪ-ಅಮ್ಮಂಗೆ ಸುಳ್ಳು ಹೇಳುತ್ತಿದ್ದೆವು. ಅಲ್ಲಿ ಇದ್ದ ಆಹಾರದಲ್ಲಿ ಅಲ್ಪ-ಸ್ವಲ್ಪ ತಿಂದು ಬದುಕುತ್ತಿದ್ದೆವು. ಪ್ರತಿ ಕ್ಷಣ ನಮ್ಮಲ್ಲಿ ಆತಂಕ ಇತ್ತು. ಯಾವಾಗ ಎಲ್ಲಿ ಬಾಂಬ್ ಬೀಳುತ್ತೋ ಅನ್ನೋ ಭೀತಿ ಇತ್ತು ಎಂದು ತಿಳಿಸಿದ್ದಾಳೆ. ಇದನ್ನೂ ಓದಿ: ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು

ಸದ್ಯ ಕರ್ನಾಟಕದ 13 ವಿದ್ಯಾರ್ಥಿಗಳು ಸೇರಿ ಒಟ್ಟು 250 ಮಂದಿ ರೊಮೇನಿಯಾದಿಂದ ದೆಹಲಿ ತಲುಪಿದ್ದಾರೆ. ರಾತ್ರಿ 3:30ಕ್ಕೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವ ಜೋತಿರಾಧಿತ್ಯಸಿಂದ್ಯಾ ಸ್ವಾಗತಿಸಿದರು. ಬಳಿಕ ಮಾತನಾಡಿದ ಅವರು, ಎರಡನೇ ವಿಮಾನದಲ್ಲಿ 250 ವಿದ್ಯಾರ್ಥಿಗಳು ಬಂದಿದ್ದಾರೆ. ಇಂದು ಮತ್ತೆರಡು ವಿಮಾನಗಳ ಮೂಲಕ ಭಾರತೀಯರು ಬರಲಿದ್ದಾರೆ. ನಾಲ್ಕು ದೇಶಗಳ ಸಹಕಾರದಲ್ಲಿ ಕಾರ್ಯಚರಣೆ ಮಾಡುತ್ತಿದ್ದೇವೆ. ಪರಿಸ್ಥಿತಿ ಆಧರಿಸಿ ಮತ್ತಷ್ಟು ವೇಗವಾಗಿ ಭಾರತೀಯರನ್ನು ಕರೆ ತರಲಾಗುವುದು ಎಮದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *