ಅರ್ಥಶಾಸ್ತ್ರದ ಬಗ್ಗೆ ಗೊತ್ತಿರೋರು ಬೆಲೆ ಏರಿಕೆ ವಿರೋಧ ಮಾಡಲ್ಲ: ಆರ್.ವಿ.ದೇಶಪಾಂಡೆ

Public TV
1 Min Read

ಬೆಂಗಳೂರು: ಅರ್ಥಶಾಸ್ತ್ರದ(Economics) ಬಗ್ಗೆ ಗೊತ್ತಿರುವ ಯಾರೂ ಬೆಲೆ ಏರಿಕೆ ವಿರೋಧ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ದೇಶಪಾಂಡೆ(R V Deshpande) ಅವರು ರಾಜ್ಯ ಸರ್ಕಾರದ ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿಕೊಂಡರು.

ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ ಮಾಡುತ್ತಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಲೆ ಏರಿಕೆ ವಿರೋಧಿಸಿ ಬಿಜೆಪಿ(BJP) ಅಹೋರಾತ್ರಿ ಧರಣಿ ಮಾಡುವುದು ಅವರ ಇಷ್ಟ. ಆದರೆ, ಅದರಲ್ಲಿ ಯಶಸ್ಸು ಆಗುವುದಿಲ್ಲ. ಬಿಜೆಪಿ ಅಧಿಕಾರದಲ್ಲಿ ಬೆಲೆ ಏರಿಕೆ ಮಾಡಿರಲಿಲ್ವಾ? ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿಗಳೇ ಪ್ರಮುಖ ಕಾರಣ ಎಂದು ಆರೋಪ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್‌ನವರು ವಕ್ಫ್ ಆಸ್ತಿ ಕಬಳಿಕೆ ಮುಚ್ಚಿ ಹಾಕಲು ತಿದ್ದುಪಡಿಗೆ ವಿರೋಧ ಮಾಡ್ತಿದ್ದಾರೆ: ಬೊಮ್ಮಾಯಿ

ರಾಜ್ಯ ಸರ್ಕಾರ ಹಾಲಿನ ದರ ಏರಿಕೆ(Milk Rate Hike) ಮಾಡಿದೆ. ಇದಕ್ಕೆ ಕಾರಣ ಮೇವಿನ ಬೆಲೆ ಜಾಸ್ತಿ ಆಗಿರುವುದು. ಬೆಲೆ ಏರಿಕೆ ಆದಾಗ ಸ್ವಲ್ಪ ಅಡ್ಜೆಸ್ಟ್ ಮಾಡಿಕೊಳ್ಳಬೇಕು. ಹಣ ಎಲ್ಲಿಂದ ತರಲು ಆಗುತ್ತದೆ. ಸರ್ಕಾರ ಸ್ವಲ್ಪ ಬೆಲೆ ಏರಿಕೆ ಮಾಡಿದೆ ನಿಜ. ಹಾಗಂತ ಜನರನ್ನ ಲೂಟಿ ಮಾಡಲು ಮಾಡಿದೆ ಎಂದು ಹೇಳುವುದು ಸರಿಯಲ್ಲ. ಪೆಟ್ರೋಲ್, ಡೀಸೆಲ್ ದರ ಕಂಟ್ರೋಲ್ ಮಾಡುವುದು ಕೇಂದ್ರ ಸರ್ಕಾರ. ಕೆಲವೊಮ್ಮೆ ದರ ಹೆಚ್ಚಳ ಅನಿವಾರ್ಯವಾಗಿರುತ್ತದೆ. ಅರ್ಥಶಾಸ್ತ್ರದ ಬಗ್ಗೆ ಗೊತ್ತಿರುವವರು ಯಾರು ಬೆಲೆ ಏರಿಕೆ ವಿರೋಧಿಸಲ್ಲ ಇದು ರಿಯಾಲಿಟಿ. ಇದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ನೀತಿ ಪಾಠ ಬೋಧನೆ ಮಾಡಿದರು. ಇದನ್ನೂ ಓದಿ: ಬದುಕು ಕೊಟ್ಟ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಫ್ಯಾನ್ಸ್‌ಗೆ ಬಹಿರಂಗ ಪತ್ರ ಬರೆದ ನಟ

ಜನರಿಗೆ ತೊಂದರೆ ಆಗಲು ಬೆಲೆ ಏರಿಕೆ ಮಾಡಿಲ್ಲ. ಕಾಂಗ್ರೆಸ್ ಏನೇ ಮಾಡಿದರೂ ನ್ಯಾಯ ಬದ್ಧವಾಗಿ ಮಾಡುತ್ತದೆ. ಅನೇಕ ಯೋಜನೆಯನ್ನು ಜನರಿಗಾಗಿಯೇ ತರುತ್ತಿದ್ದೇವೆ. ಅದರ ಲಾಭ ಎಲ್ಲರಿಗೂ ಹೋಗುತ್ತಿದೆ. ಗ್ಯಾರಂಟಿ ಯೋಜನೆಯಿಂದ ಎಲ್ಲಾ ಜನರಿಗೆ ಅನುಕೂಲ ಆಗಿದೆ ಎಂದು ಸಮರ್ಥಿಸಿಕೊಂಡರು.

Share This Article