ಕತಾರ್‌ನಲ್ಲಿ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ; ಕುಟುಂಬಸ್ಥರ ಭೇಟಿಯಾದ ವಿದೇಶಾಂಗ ಸಚಿವ

By
2 Min Read

ನವದೆಹಲಿ: ಕತಾರ್‌ನಲ್ಲಿ (Qatar) ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ (Former Navy Personnel) 8 ಮಂದಿ ಮಾಜಿ ಸಿಬ್ಬಂದಿ ಕುಟುಂಬಸ್ಥರನ್ನು ವಿದೇಶಾಂಗ ಸಚಿವ ಎಸ್.‌ ಜೈಶಂಕರ್‌ (Jaishankar) ಭೇಟಿಯಾದರು.

ಕುಟುಂಬಸ್ಥರ ಕಳವಳ ಮತ್ತು ನೋವಿಗೆ ಸ್ಪಂದಿಸಿದ ಜೈಶಂಕರ್‌, ಅವರ ಬಿಡುಗಡೆಗೆ ಭಾರತವು ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ! – ಭಾರತಕ್ಕೆ ಆಘಾತ

ಈ ಕುರಿತು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೈಶಂಕರ್‌, ಕತಾರ್‌ನಲ್ಲಿ ಬಂಧಿತರಾಗಿರುವ 8 ಭಾರತೀಯರ ಕುಟುಂಬಗಳನ್ನು ಭೇಟಿಯಾದೆ. ಪ್ರಕರಣಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಅವರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ. ಆ ನಿಟ್ಟಿನಲ್ಲಿ ಕುಟುಂಬಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತದೆ ಎಂದು ತಿಳಿಸಿದ್ದಾರೆ.

ಕತಾರ್‌ನಲ್ಲಿ 1 ವರ್ಷಕ್ಕೂ ಹೆಚ್ಚು ಕಾಲ ಬಂಧಿತರಾಗಿರುವ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಗುರುವಾರ ಕತಾರ್‌ನ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ತೀರ್ಪಿಗೆ ಭಾರತ (India) ತೀವ್ರ ಆಘಾತ ವ್ಯಕ್ತಪಡಿಸಿದೆ. ಸಿಬ್ಬಂದಿ ಬಿಡುಗಡೆಗೆ ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಅನ್ವೇಷಿಸುತ್ತಿರುವುದಾಗಿ ಹೇಳಿತ್ತು. ಇದನ್ನೂ ಓದಿ: ಫೇಸ್‍ಬುಕ್ ಗೆಳೆಯನಿಗಾಗಿ ಪಾಕ್‍ಗೆ ತೆರಳಿದ್ದಾಕೆಗೆ ಈಗ ಮಕ್ಕಳನ್ನು ನೋಡುವ ಬಯಕೆ!

ನಾವು ಮರಣದಂಡನೆಯ ತೀರ್ಪಿನಿಂದ ತೀವ್ರ ಆಘಾತಕ್ಕೊಳಗಾಗಿದ್ದೇವೆ ಮತ್ತು ವಿವರವಾದ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಅವರ ಕುಟುಂಬ ಸದಸ್ಯರು ಮತ್ತು ಕಾನೂನು ತಂಡದೊಂದಿಗೆ ಸಂಪರ್ಕದಲ್ಲಿದ್ದೇವೆ. ಸಾಧ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅಧಿಕೃತ ಹೇಳಿಕೆಯಲ್ಲಿ ತಿಳಿಸಿತ್ತು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್