ಕರ್ನಾಟಕ ಬಂದ್‍ಗೆ ಮತ್ತಷ್ಟು ಅಪಸ್ವರ – ಚಿತ್ರೋದ್ಯಮದ ನಡೆಗೆ ಸಾ.ರಾ.ಗೋವಿಂದು ಕಿಡಿ

Public TV
1 Min Read

ಬೆಂಗಳೂರು: ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಸಂಘಟನೆಗಳು ಏಕಾಏಕಿ ಕರೆ ಕೊಟ್ಟ ಕರ್ನಾಟಕ ಬಂದ್‍ಗೆ ಅಪಸ್ವರ ವ್ಯಕ್ತವಾಗುತ್ತಲೇ ಇದೆ. ಹತ್ತು ಹಲವು ಸಂಘಟನೆಗಳು ಬಂದ್ ಪರವಾಗಿಲ್ಲ. ಕೇವಲ ನೈತಿಕ ಬೆಂಬಲ ಕೊಡುತ್ತೇವೆ ಎನ್ನುತ್ತಿವೆ. ಈ ಸಾಲಿಗೆ ಈಗ ಚಿತ್ರೋದ್ಯಮ ಕೂಡ ಸೇರಿದೆ.

ಮೊನ್ನೆ ಬಂದ್ ಘೋಷಣೆ ಮಾಡಿದ್ದ ಸಾರಾ ಗೋವಿಂದು, ಚಿತ್ರೋದ್ಯಮದ ಸಂಪೂರ್ಣ ಬೆಂಬಲ ಇದೆ ಎಂದು ಘೋಷಿಸಿದ್ದರು. ಆದರೆ ಈ ಘೋಷಣೆಗೆ ಮುನ್ನ, ಫಿಲಂ ಚೇಂಬರ್ ಜೊತೆಯಾಗಲಿ, ಚಿತ್ರೋದ್ಯಮದ ಗಣ್ಯರ ಜೊತೆ ಸಾರಾ ಗೋವಿಂದು ಚರ್ಚೆ ನಡೆಸಿರಲಿಲ್ಲ. ಈ ಬೆನ್ನಲ್ಲೇ ಇಂದು ಸಭೆ ಸೇರಿದ್ದ ಫಿಲ್ಮ್ ಚೇಂಬರ್ ಬಂದ್‍ನಲ್ಲಿ ಚಿತ್ರೋದ್ಯಮ ಭಾಗಿ ಆಗಲ್ಲ. ಆದರೆ ಬಂದ್‍ಗೆ ನೈತಿಕ ಬೆಂಬಲ ಇರಲಿದೆ. ಡಿ.31ರಂದು ಚಿತ್ರರಂಗದ ಎಲ್ಲಾ ಚಟುವಟಿಕೆ ನಡೆಯಲಿವೆ ಎಂದು ಘೋಷಿಸಿತು.

ಚಿತ್ರರಂಗದ ಈ ನಿರ್ಧಾರಕ್ಕೆ ಸಾರಾ ಗೋವಿಂದು, ನೈತಿಕ ಬೆಂಬಲ ಅಲ್ಲ. ಕನ್ನಡಿಗರಾಗಿ ಬಂದ್‍ಗೆ ಬರೀ ನೈತಿಕ ಬೆಂಬಲ ಅಂತೀರಿ. ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಸ್ಲೋ ಪಾಯಿಸನ್: ಬಾಲಕೃಷ್ಣ ಕಿಡಿ

ಬಂದ್‍ಗೆ ಚಿತ್ರೋದ್ಯಮ ಸಂಪೂರ್ಣ ಬೆಂಬಲ ನೀಡಬೇಕು ಎಂದು ಒತ್ತಾಯಿಸಿ ಫಿಲ್ಮ್ ಚೇಂಬರ್ ಮುಂದೆ ನಾಳೆ ಪ್ರತಿಭಟನೆ ನಡೆಸಲು ಕನ್ನಡ ಪರ ಸಂಘಟನೆಗಳು ತೀರ್ಮಾನಿಸಿವೆ.

ಈ ಮಧ್ಯೆ ಮೈಸೂರಲ್ಲಿ ಮಾತನಾಡಿದ ನಟ ಶಿವಣ್ಣ, ಫಿಲಂ ಚೇಂಬರ್ ನಿರ್ಧಾರಕ್ಕೆ ನಾವು ಬದ್ಧ ಎಂದು ಘೋಷಿಸಿದ್ದಾರೆ. ಪರೋಕ್ಷವಾಗಿ ಬಂದ್‍ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಯಕರ್ನಾಟಕ ಸಂಘಟನೆ ಬಂದ್‍ಗೆ ನೀಡಿದ್ದ ಬೆಂಬಲ ಹಿಂಪಡೆದಿದೆ. ಈಗಾಗಲೇ, ಕರವೇ ನಾರಾಯಣಗೌಡ ಕೂಡ ಬಂದ್‍ಗೆ ಬೆಂಬಲ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಹೊಸವರ್ಷದಿಂದ ವಾಟರ್‌ ಟ್ಯಾಕ್ಸಿ ಸೇವೆ ಆರಂಭ – ದರ ಎಷ್ಟು?

Share This Article
Leave a Comment

Leave a Reply

Your email address will not be published. Required fields are marked *