ಶಬರಿಮಲೆಗೆ ತೆರಳಿದ ಕರ್ನಾಟಕದ ಟಿಟಿ ವಾಹನ ಅಪಘಾತ – 3 ಸಾವು, 11 ಜನರಿಗೆ ಗಾಯ

Public TV
1 Min Read

ತಿರುವನಂತಪುರಂ: ಶಬರಿಮಲೆ ದೇವರ ದರ್ಶನಕ್ಕೆ ತೆರಳಿದ ಕರ್ನಾಟಕದ ಟಿಟಿ ವಾಹವೊಂದು ಭೀಕರ ಅಪಘಾತಕ್ಕಿಡಾಗಿ ಮೂವರು ಮರಣ ಹೊಂದಿರುವ ಘಟನೆ ಕೇರಳದ ಕೋಝಿಕ್ಕೋಡ್‍ನ ಪುರಕ್ಕಾಟ್ಟಿರಿಯಲ್ಲಿ ನಡೆದಿದೆ.

ಕರ್ನಾಟಕ ಮೂಲದ ಭಕ್ತರು ಟಿಟಿ ವಾಹನದಲ್ಲಿ ಶಬರಿ ಮಲೆಗೆ ತೆರಳುತ್ತಿದ್ದಾಗ ಪುರಕ್ಕಾಟ್ಟಿರಿಯ ಪುಲದಿಕುನ್ನು ಬೈಪಾಸ್ ಬಳಿ ಟಿಪ್ಪರ್ ಲಾರಿ ಮತ್ತು ಟಿಟಿ ನಡುವೆ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮರಣ ಹೊಂದಿದ್ದು 11 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: 7 ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾಗಿದ್ದ ಭೂಪ ಅರೆಸ್ಟ್

ಗಾಯಾಳುಗಳನ್ನು ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರನ್ನು ಕರ್ನಾಟಕ ಮೂಲದ ಶಿವಣ್ಣ ಮತ್ತು ನಾಗರಾಜ ಎಂದು ಗುರುತಿಸಲಾಗಿದ್ದು, ಟಿಪ್ಪರ್ ಚಾಲಕ ಎರ್ನಾಕುಲಂ ಮೂಲದವರಾಗಿದ್ದಾರೆ. ಇದನ್ನೂ ಓದಿ: 13ರ ಬಾಲಕಿ ಮೇಲೆ 16 ಮಂದಿಯಿಂದ ಸಾಮೂಹಿಕ ಅತ್ಯಾಚಾರ – ನೋವಿನ ಕಥೆ ಬಿಚ್ಚಿಟ್ಟ ತಂದೆ!

Share This Article
Leave a Comment

Leave a Reply

Your email address will not be published. Required fields are marked *