ಆಪರೇಷನ್ ಸಿಂಧೂರ | ಪ್ರಧಾನಿ ಹಾಗೂ ರಕ್ಷಣಾ ತಂಡಗಳನ್ನು ಶ್ಲಾಘಿಸಿದ – ತೆಂಡೂಲ್ಕರ್

Public TV
1 Min Read

ನವದೆಹಲಿ: ಆಪರೇಷನ್ ಸಿಂಧೂರದ(Operation Sindoor) ಯಶಸ್ವಿಗೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ(Narendra Modi) ಹಾಗೂ ರಕ್ಷಣಾ ತಂಡಗಳ ಕುರಿತು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್(Sachin Tendulkar) ಪ್ರಶಂಸೆಯ ಬರಹವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ಆಪರೇಷನ್ ಸಿಂಧೂರದ ಕಾರ್ಯಚರಣೆಯಲ್ಲಿ 1.6 ಬಿಲಿಯನ್‌ಗಿಂತಲೂ ಹೆಚ್ಚು ಜನರು ಒಗ್ಗಟ್ಟಿನಿಂದ ಹೋರಾಡಿದ್ದಾರೆ. ಭಾರತೀಯ ಸೇನೆ ಬಲವಾದ ದೃಢನಿಶ್ಚಯ ಮತ್ತು ಸಂಯಮದ ಹೋರಾಡಿದೆ. ಇದನ್ನೂ ಓದಿ: ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ

ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ಮೂರು ರಕ್ಷಣಾ ತಂಡಗಳ ಅವಿಶ್ರಾಂತ ಪರಿಶ್ರಮವು ಗಮನಾರ್ಹವಾಗಿದೆ. ಅಲ್ಲದೇ ನಮ್ಮ ಧೈರ್ಯಶಾಲಿ ಸೈನಿಕರು ಹಾಗೂ ಗಡಿ ಪ್ರದೇಶದಲ್ಲಿ ವಾಸಿಸುತ್ತಿರುವ ನಾಗರಿಕರ ಬಗ್ಗೆ ಇಲ್ಲಿ ನಾನು ವಿಶೇಷವಾಗಿ ಉಲ್ಲೇಖಿಸುತ್ತಿದ್ದೇನೆ. ಜೈ ಹಿಂದ್ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Share This Article