5 ವರ್ಷದ ನಂತರ ಮಾಜಿ ಸಚಿವ ಚೆಲುವರಾಯಸ್ವಾಮಿ ಪುತ್ರ ಸಚಿನ್ ಕಮ್ ಬ್ಯಾಕ್

Public TV
1 Min Read

ಮಾಜಿ ಸಚಿವ ಚೆಲುವರಾಯಸ್ವಾಮಿ ಸುಪುತ್ರ ಸಚಿನ್, ಕಳೆದ ಐದು ವರ್ಷದ ಹಿಂದೆ ಹ್ಯಾಪಿ ಬರ್ತ್​​ಡೇ  ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು. ಮೊದಲ ಸಿನಿಮಾದಲ್ಲಿಯೇ ಭರವಸೆ ಮೂಡಿಸಿದ್ದ ಸಚಿನ್ ಒಂದಷ್ಟು ವರ್ಷಗಳ ಕಾಲ ಸಿನಿಮಾ ಲೋಕದಿಂದ ದೂರ ಸರಿದಿದ್ದರು. ಇದೀಗ ಬೆಂಗಳೂರು ಬಾಯ್ಸ್ ಸಿನಿಮಾ ಮೂಲಕ ಸಚಿನ್ ಮತ್ತೆ ಅದ್ಧೂರಿಯಾಗಿ ಕಂಬ್ಯಾಕ್ ಆಗಿದ್ದಾರೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

ಹೊಸ ಉತ್ಸಾಹ, ಹುಮ್ಮಸ್ಸಿನೊಂದಿಗೆ ಸಚಿನ್, ಫೀಲ್ಡ್​​​ಗೆ​​​​​​​​​​​​ ಇಳಿದಿದ್ದು, ಈ ಬಾರಿ ಭರ್ಜರಿ ತಯಾರಿ ಮಾಡಿಕೊಂಡು ಎಂಟ್ರಿ‌ ಕೊಟ್ಟಿದ್ದಾರೆ. ಮಾಸ್ ಎಲಿಮೆಂಟ್ಸ್​​​​​​ ಕಥೆ ಆಧರಿಸಿರುವ ‘ಬೆಂಗಳೂರು ಬಾಯ್ಸ್​​​​​​’ ಸಿನಿಮಾಗಾಗಿ, ಆ್ಯಕ್ಟಿಂಗ್, ಡ್ಯಾನ್ಸಿಂಗ್ ಜೊತೆ ಫಿಟ್ನೆಸ್ ಕಡೆಗೂ ಹೆಚ್ಚಿನ ಗಮನ ಹರಿಸಿದ್ದಾರೆ. ಇದನ್ನೂ ಓದಿ : ಮಿಸೆಸ್ ಇಂಡಿಯಾ ಆಗಲು ನಿವೇದಿತಾ ಗೌಡ ತಯಾರಿ : ಕ್ಯಾಟ್ ವಾಕ್ ವಿಡಿಯೋದಲ್ಲಿ ಚಂದನ್ ಶೆಟ್ಟಿ ಬೊಂಬೆ

ಮಲ್ಟಿಸ್ಟಾರ್ ಚಿತ್ರವಾಗಿರುವ ಬೆಂಗಳೂರು ಬಾಯ್ಸ್ ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ಗುಟ್ಟುಬಿಟ್ಟು ಕೊಡದ ಸಚಿನ್, ಇದೊಂದು ರೊಮ್ಯಾಂಟಿಕ್‌ ಕಾಮಿಡಿ ಮನರಂಜನೆಯ ಚಿತ್ರವಾಗಿದ್ದು, ಕಾಲೇಜು, ಎಮೋಷನ್‌, ಪ್ರೇಮ ಕತೆ ಹೀಗೆ ಎಲ್ಲ ಅಂಶಗಳೂ ಸಿನಿಮಾದಲ್ಲಿವೆ ಎನ್ನುತ್ತಾರೆ. ಈಗಾಗಲೇ ರಿಲೀಸ್ ಆಗಿರುವ ಫಸ್ಟ್ ಲುಕ್ ಟೀಸರ್ ಸಿನಿಮಾ ಮೇಲಿನ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡಿದೆ. ಇದನ್ನೂ ಓದಿ : ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಜತೆ ಇರೋ ಹುಡುಗ ಯಾರು?

ವಿಕ್ರಮ್ ಕೆ ವೈ ಸಿನಿಮಾದ ಸಿನಿಮಾಗೆ ಬಂಡವಾಳ ಹೂಡಿದ್ದು, ಪ್ರಶಾಂತ್ ರಾವ್ ಪುರಂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದು, ‘ಅಂಬಿ ನಿಂಗೆ ವಯಸ್ಸಾಯ್ತೋ’ ಖ್ಯಾತಿಯ ಗುರುದತ್ ಗಾಣಿಗ  ಕ್ರಿಯೇಟಿವ್ ಡೈರೆಕ್ಟರ್ ಆಗಿ ಬೆಂಗಳೂರು ಬಾಯ್ಸ್ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಈ ಸಿನಿಮಾದ ಜೊತೆಯಲ್ಲಿ ಸಚಿನ್ ಭತ್ತಳಿಕೆಗೆ ಮತ್ತೊಂದು ಸಿನಿಮಾ ಸೇರ್ಪಡೆಗೊಂಡಿದ್ದು, ಸದ್ಯದಲ್ಲಿಯೇ ಆ ಹೊಸ ಪ್ರಾಜೆಕ್ಟ್ ಬಗ್ಗೆ ಅವರೇ‌ ಮಾಹಿತಿ ನೀಡಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *