ಪೆದ್ದಮ್ಮ ತಲ್ಲಿ ದೇವಿಗೆ ಸೀರೆ, ಗಾಜಿನ ಬಳೆ ಅರ್ಪಣೆ ಮಾಡಿದ ಸಮಂತಾ

Public TV
1 Min Read

ಮಂತಾ (Samantha) ನಟನೆಯ `ಶಾಕುಂತಲಂ’ (Shakuntalam) ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಚಿತ್ರದ ಪ್ರಚಾರ ಕಾರ್ಯ ಶುರುವಾಗುವ ಮುನ್ನವ ಸ್ಯಾಮ್ ದೇವಿ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತ ವೀಡಿಯೋವೊಂದನ್ನ  ಸಾಮಾಜಿಕ ಜಾಲತಾಣದಲ್ಲಿ ನಟಿ ಶೇರ್‌ ಮಾಡಿದ್ದಾರೆ.

ಸಮಂತಾ ಮೈಯೋಸಿಟೀಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆದುಕೊಳ್ತಿದ್ದಾರೆ. ಅನಾರೋಗ್ಯದ ಸಮಸ್ಯೆ ಮತ್ತು ವೈಯಕ್ತಿಕ ಸಮಸ್ಯೆಯಿಂದ ಬಳಲುತ್ತಿರುವ ನಟಿ ಸದಾ ಪೂಜೆ, ಧ್ಯಾನ, ದೇವರ ಸನ್ನಿಧಿ ಎಂದು ದೇವರ ಮೊರೆ ಹೋಗುತ್ತಿದ್ದಾರೆ. ಇದನ್ನೂ ಓದಿ: ಹೊಸ ಫೋಟೋಶೂಟ್‌ ಹಂಚಿಕೊಂಡ ದೀಪಿಕಾ ದಾಸ್‌

`ಯಶೋದ’ (Yashoda) ಚಿತ್ರದ ಸೂಪರ್ ಸಕ್ಸಸ್ ನಂತರ ನಟಿ ಸಮಂತಾ `ಶಾಕುಂತಲಂ’ ಚಿತ್ರದ ಮೂಲಕ ಬರುತ್ತಿದ್ದಾರೆ. ಈ ಸಿನಿಮಾ ಏಪ್ರಿಲ್ 14ಕ್ಕೆ ತೆರೆಗೆ ಅಪ್ಪಳಿಸಲು ರೆಡಿಯಾಗಿದೆ. ಈ ಬೆನ್ನಲ್ಲೇ ಚಿತ್ರತಂಡದ ಜೊತೆ ಹೈದರಾಬಾದ್‌ನ ಪ್ರಸಿದ್ಧ ದೇವಸ್ಥಾನ ಪೆದ್ದಮ್ಮ ತಲ್ಲಿ ದೇವಿಗೆ ಸೀರೆ ಜೊತೆ ಗಾಜಿನ ಬಳೆಯನ್ನ ಅರ್ಪಣೆ ಮಾಡಿ ಆಶೀರ್ವಾದ ಪಡೆದು ಬಂದಿದ್ದಾರೆ.

 

View this post on Instagram

 

A post shared by Samantha (@samantharuthprabhuoffl)

ನಟಿ ಸಮಂತಾ ಬಿಳಿ ಬಣ್ಣದ ಚೂಡಿದಾರ್ ಧರಿಸಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸಹ ನಟ ದೇವ್ ಮೋಹನ್ ಕೂಡ ಬಿಳಿ ಬಣ್ಣದ ಬಟ್ಟೆ ಧರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *