83 ಕೆ.ಜಿ. ಶ್ರೀಗಂಧದ ಜೊತೆ ಇಬ್ಬರ ಬಂಧನ

Public TV
1 Min Read

ದಾವಣಗೆರೆ: ಶ್ರೀಗಂಧ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಚನ್ನಗಿರಿ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರನ್ನು ಬಂಧಿಸಿದ್ದಾರೆ.

ಜಿಲ್ಲೆಯ ಚನ್ನಗಿರಿ ತಾಲೂಕಿನ ಶಾಂತಿ ಸಾಗರ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಕಡಿದು ಸಾಗಿಸುತ್ತಿದ್ದ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದೆ. ಮುನಿಯಪ್ಪ, ರಾಧಾಕೃಷ್ಣ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾವಿನಕಟ್ಟೆ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು. ಇದನ್ನೂ ಓದಿ: ಫಿಟ್ ಆಗಿದ್ದ ಸಿದ್ಧಾರ್ಥ್ ಹೃದಯಾಘಾತಕ್ಕೆ ಕಾರಣವೇನು?

ಬಂಧಿತರಿಂದ 83 ಕೆ.ಜಿ. ಶ್ರೀಗಂಧ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಅರಣ್ಯಾಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಹೆಚ್ಚಿನ ಜನರ ಬಂಧನಕ್ಕೆ ಬಕೆ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *