ಬೆಂಗಳೂರು: ಸ್ಯಾಂಡಲ್ವುಡ್ ನ `ಯುಗಪುರುಷ’ ಚಿತ್ರದ ನಾಯಕ ನಟನನ್ನು ಕೊಲ್ಲಲು ಸುಪಾರಿ ನೀಡಿರುವ ಬಗ್ಗೆ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರೂ ಆಗಿರುವ ನಟ ಅರ್ಜುನ್ ದೇವ್ ರನ್ನು ಕೊಲ್ಲಲು ಕಾಶೀಫ್ ಎಂಬಾತ ಸುಪಾರಿ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಮನೆ ಮುಂದೆ ಕೊಲ್ಲಲು ಹೊಂಚು ಹಾಕಿ ಹೋಗಿದ್ದಾರೆ. ಹೀಗಾಗಿ ದಯವಿಟ್ಟು ನನಗೆ ರಕ್ಷಣೆ ನೀಡಿ ಅಂತ ಇದೀಗ ನಟ ಅರ್ಜುನ್ ದೇವ್ ರಕ್ಷಣೆ ಕೋರಿ ಪೊಲೀಸ್ ಠಾಣೆ ಮಟ್ಟಿಲೇರಿದ್ದಾರೆ. ಆದ್ರೆ ಯಾರು ಸುಪಾರಿ ಕೊಟ್ಟರು, ಯಾಕಾಗಿ ಸುಪಾರಿ ಕೊಟ್ಟರು ಅನ್ನೋದನ್ನು ನಟ ತಿಳಿಸಿಲ್ಲ. ಇದನ್ನೂ ಓದಿ: `ಯುಗಪುರುಷ’ ಚಿತ್ರದ ನಟನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಯತ್ನ
ಈ ಹಿಂದೆ ಅರ್ಜುನ್ ದೇವ್ ಮೇಲೆ ಹಲ್ಲೆ ನಡೆದಿತ್ತು. ರಾಮನಗರ ತಾಲೂಕಿನ ಮಾಯಗಾನಹಳ್ಳಿ ಸಮೀಪ ಪಿತ್ರಾರ್ಜಿತ ಆಸ್ತಿ ವ್ಯಾಜ್ಯ ಸಂಬಂಧ ನ್ಯಾಯಾಲದ ವಿಚಾರಣೆಗೆ ನಟ ಅರ್ಜುನ್ ದೇವ್ ಬೆಂಗಳೂರಿನಿಂದ ರಾಮನಗರ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹೊರಟಿದ್ದರು. ಬೆಂಗಳೂರು-ಮೈಸೂರು ಹೆದ್ದಾರಿಯ ಎಸ್ಬಿಐ ಬ್ಯಾಂಕ್ ಪಕ್ಕದ ಕೋರ್ಟ್ನ ಮುಂಭಾಗದ ಗೇಟ್ ಸಮೀಪ ಕಾರು ನಿಲ್ಲಿಸುತ್ತಿದ್ದಂತೆ ಎರಡು ಬೈಕ್ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ತಂಡ ರಾಡ್ನಿಂದ ಹಲ್ಲೆಗೆ ಮುಂದಾಗಿದ್ದರು.
ಸದ್ಯ ಕೊಲೆಗೆ ಸುಪಾರಿ ನೀಡಿದ ಪ್ರಕರಣ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.