ಕೊಡಗು ಸಂತ್ರಸ್ತರಿಗೆ ಮಿಡಿಯಿತು ಸ್ಯಾಂಡಲ್ ವುಡ್ ತಾರೆಯರ ಮನ

Public TV
1 Min Read

ಬೆಂಗಳೂರು: ರಾಜ್ಯದ ವಿವಿಧೆಡೆ ವರುಣನ ಆರ್ಭಟದಿಂದ ಕೊಡಗು ಸಂಪೂರ್ಣ ಮುಳುಗಿದ್ದು, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಸ್ಯಾಂಡಲ್ ವುಡ್ ತಾರೆಯರು ಮನವಿ ಮಾಡಿಕೊಂಡಿದ್ದಾರೆ.

ನಟ ದರ್ಶನ್, ಸುದೀಪ್, ಪುನೀತ್ ರಾಜ್ ಕುಮಾರ್ ಮತ್ತು ನಟಿ ಹರ್ಷಿಕಾ ಪೂಣ್ಣಚ್ಚ ಅವರು ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ತನ್ನ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಟ ದರ್ಶನ್ ಅವರು, ನಾವು ಕೊಡಗು ಜನರಿಗಾಗಿ ಪ್ರಾರ್ಥನೆ ಮಾಡಿಕೊಳ್ಳೋಣ. ನಮ್ಮ ಪ್ರಾರ್ಥನೆ ಮತ್ತು ನಮ್ಮ ಬೆಂಬಲ ಅವರಿಗೆ ಬೇಕಾಗುತ್ತದೆ. ನಾವೆಲ್ಲರೂ ಅವರಿಗೆ ಸಹಾಯ ಮಾಡೋಣ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಮಳೆಯಿಂದಾಗಿ ತೊಂದರೆಗೆ ಒಳಗಾಗಿರುವ ಜನರಿಗೆ ಸಹಾಯ ಮಾಡಿ. ನೀವು ಸಹಾಯ ಮಾಡಿದರೆ ಅದು ನನಗೆ ನೀಡಿದ ಬಹುದೊಡ್ಡ ಉಡುಗೊರೆಯಾಗುತ್ತದೆ. ನಾನು ಸರ್ಕಾರಕ್ಕೂ ಮನವಿ ಮಾಡಿಕೊಳ್ಳುತ್ತೇನೆ ಎಂದು ಕಿಚ್ಚ ಸುದೀಪ್ ಅಭಿಮಾನಿ ಸಂಘಗಳಲ್ಲಿ ಮನವಿ ಮಾಡಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು ಕೊಡಗು ಮತ್ತು ಕೇರಳವನ್ನು ರಕ್ಷಿಸೋಣ. ಎಲ್ಲರೂ ಒಟ್ಟಿಗೆ ಸೇರಿ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡೋಣ ಎಂದು ಫೇಸ್ ಬುಕ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಇತ್ತ ನಟಿ ಹರ್ಷಿಕಾ ಪೂಣಚ್ಚ ಅವರು ಕೂಡ ಕೊಡಗು ಕಾಪಾಡೋಣ ಸಹಾಯ ಮಾಡಿ ಎಂದು ಸಂಪರ್ಕಿಸಬೇಕಾದ ನಂಬರ್ ಕೂಡ ಹಾಕಿ ಮನವಿ ಮಾಡಿಕೊಂಡಿದ್ದಾರೆ.

ಸಂತ್ರಸ್ತರಿಗೆ ಹಾಸಿಗೆ, ಆಹಾರ ಧಾನ್ಯ ಹಾಗೂ ಅಗತ್ಯ ವಸ್ತುಗಳನ್ನು ಒದಗಿಸಲು ಸಹಾಯ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿಕೊಂಡಿದ್ದರು. `ಡೊನೆಟ್ ಕೊಡಗು’ ಎನ್ನವ ಹೆಸರಿನಲ್ಲಿ ಪರಿಹಾರ ನಿಧಿ ಸಂಗ್ರಹಿಸಲಾಗುತ್ತಿದೆ.

ಯಾರನ್ನು ಸಂಪರ್ಕಿಸಬೇಕು?
ಮಾಹಿತಿಗಾಗಿ ಬೆಂಗಳೂರಿನಲ್ಲಿ ರೋಶನ್ ಸೋಮಣ್ಣ (98452 43561) ಕಿಶೋರ್ ಉತ್ತಪ್ಪ (98453 90522) ನಿರನ್ ಸೋಮಣ್ಣ (9980 990599) ಹಾಗೂ ಮೈಸೂರಿನಲ್ಲಿ ಮಲ್ಚಿರಾ ಪೊನಪ್ಪ (98441 38873), ಚಿಂದಾನಂದ ಶಮಿ (99459 99366), ಡಾ. ಅಯ್ಯಪ್ಪ (94831 10841) ಅವರನ್ನು ಸಂಪರ್ಕಿಸಬಹುದು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://twitter.com/actressharshika/status/1030428813069639680

Share This Article
1 Comment

Leave a Reply

Your email address will not be published. Required fields are marked *