ಲ್ಯಾಂಬೋರ್ಗಿನಿ ಕಾರು ನೋಡಲು ದಚ್ಚು ಮನೆಗೆ `ಸ್ಟಾರ್’ ನಟರು ಭೇಟಿ

Public TV
2 Min Read

ಬೆಂಗಳೂರು: ಚಾಲೆಜಿಂಗ್ ಸ್ಟಾರ್ ದರ್ಶನ್ ಅವರನ್ನು ಇದೀಗ ಸ್ಯಾಂಡಲ್‍ವುಡ್ ನ ದುಬಾರಿ ನಟ ಎಂದು ಕರೆಯುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಕೂಡ ಪಡೆಯುತ್ತಾರೆ.

ಈಗ ತಾನೇ `ಕುರುಕ್ಷೇತ್ರ’ ಸಿನಿಮಾದ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಮತ್ತೊಂದೆಡೆ ಲ್ಯಾಂಬೋರ್ಗಿನಿ ಕಾರು ಹತ್ತಿ ದರ್ಶನ್ ಸವಾರಿ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ದಚ್ಚು ಮನೆಗೆ ಕನ್ನಡದ ಸ್ಟಾರ್ ನಟರು ಭೇಟಿ ಕೊಟ್ಟಿದ್ದಾರೆ. ದರ್ಶನ್ ಅವರ ಆಪ್ತ ಸ್ನೇಹಿತರು, ಕಲಾವಿದರು ಮತ್ತು ನಿರ್ಮಾಪಕರು ಮನೆಗೆ ಭೇಟಿ ಕೊಟ್ಟು ಫೋಟೋ ತೆಗೆದುಕೊಂಡು ಸಂಭ್ರಮಿಸಿದ್ದಾರೆ.

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ `ಕುರುಕ್ಷೇತ್ರ’ ಸಿನಿಮಾದಲ್ಲಿ ದರ್ಶನ್ ಜೊತೆ ಅಭಿನಯಿಸಿದ್ದು, ಅಂದಿನಿಂದಲೂ ತುಂಬಾ ಆತ್ಮೀಯರಾಗಿದ್ದಾರೆ. ದರ್ಶನ್ ಫಾರ್ಮ್ ಹೌಸ್, ಮನೆ ಸೇರಿದಂತೆ ಅವರ ಜೊತೆ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತಿಚೇಗಷ್ಟೇ ದರ್ಶನ್ ಖರೀದಿಸಿರುವ ಲ್ಯಾಂಬೋರ್ಗಿನಿ ಕಾರು ನೋಡಲು ಅವರ ಮನೆಗೆ ಸರ್ಜಾ ಭೇಟಿ ನೀಡಿದ್ದಾರೆ

ಅರ್ಜುನ್ ಸರ್ಜಾ ಜೊತೆ ಚಿರಂಜೀವಿ ಸರ್ಜಾ ಮತ್ತು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕೂಡ ದಚ್ಚು ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. `ಮೆಜೆಸ್ಟಿಕ್’ ಚಿತ್ರದಲ್ಲಿ ಅವಕಾಶ ನೀಡಿದ್ದ ನಿರ್ಮಾಪಕ ಎಂ.ಜಿ ರಾಮಮೂರ್ತಿ ಕೂಡ ದರ್ಶನ್ ಮನೆಗೆ ಆಗಮಿಸಿ ಹೊಸ ಕಾರು ನೋಡಿ ಖುಷಿ ಪಟ್ಟಿದ್ದಾರೆ.

ನಿರ್ದೇಶಕ, ನಟ ತರುಣ್ ಸುಧೀರ್ ಕೂಡ ಹೋಗಿದ್ದಾರೆ. ಯುವ ನಟ ಯಶಸ್ ಸೂರ್ಯ ಕೂಡ ದರ್ಶನ್ ಮನೆಯಲ್ಲಿ ಕಾಣಿಸಿಕೊಂಡಿದ್ದು, ಯಶಸ್ ಸೂರ್ಯ `ಕುರುಕ್ಷೇತ್ರ’ ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ.

ಸಂಕ್ರಾಂತಿ ಹಬ್ಬದ ದಿನದಂದು ದರ್ಶನ್ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದರು. ಮೈಸೂರಿಗೆ ಹೊಸ ಕಾರಿನಲ್ಲಿ ತೆರಳಿ ನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ಬೆಟ್ಟದ ಅರ್ಚಕರಿಂದ ಪೂಜೆ ಮಾಡಿಸಿ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದರು. ದರ್ಶನ್ ಅವರ ಜೊತೆಯಲ್ಲಿ ಅವರ ಹಲವು ಗೆಳೆಯರು ಸಾಥ್ ನೀಡಿದ್ದರು.

ಸದ್ಯಕ್ಕೆ ದರ್ಶನ್ ಈಗ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮುನಿರತ್ನ ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದೊಡ್ಡ ತಾರಾಂಗಣವಿರುವ ಈ ಸಿನಿಮಾ ಬಿಡುಗಡೆಗಾಗಿ ಕರ್ನಾಟಕ ಜನತೆ ಕಾಯುತ್ತಿದ್ದಾರೆ. ಇದನ್ನು ಓದಿ: ಸ್ಯಾಂಡಲ್ ವುಡ್ ನಲ್ಲಿ ಫಸ್ಟ್ ಟೈಂ ಲ್ಯಾಂಬೋರ್ಗಿನಿಗೆ ಒಡೆಯರಾದ ದರ್ಶನ್: ವಿಡಿಯೋ ನೋಡಿ

 

Share This Article
Leave a Comment

Leave a Reply

Your email address will not be published. Required fields are marked *