ಪೊಲೀಸ್ ಠಾಣೆ ಮೆಟ್ಟಿಲೇರಿದ್ರು ಬಟ್ಟೆ ಬಿಚ್ಚಿ ಶ್ರೀರೆಡ್ಡಿಗೆ ತಿರುಗೇಟು ಕೊಟ್ಟ ಸ್ಯಾಂಡಲ್ ವುಡ್ ನಟಿ

Public TV
1 Min Read

ಬೆಂಗಳೂರು: ತೆಲುಗು ಸಿನೆಮಾ ಇಂಡಸ್ಟ್ರಿಯಲ್ಲಿ ಲೈಂಗಿಕ ಕಿರುಕುಳ ನೀಡಲಾಗ್ತಿದೆ ಅನ್ನೋ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ತೆಲುಗು ನಟಿ ಶ್ರೀ ರೆಡ್ಡಿ ವಿರುದ್ಧ ಗರಂ ಆಗಿದ್ದ ಸ್ಯಾಂಡಲ್ ವುಡ್ ನಟಿ ಕವಿತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಇತ್ತೀಚೆಗಷ್ಟೇ ತೆಲುಗು ನಟಿ ಶ್ರೀ ರೆಡ್ಡಿ, ಟಾಲಿವುಡ್ ನಲ್ಲಿ ಬಹಳ ಕೀಳುಮಟ್ಟದಲ್ಲಿ ನಡೆಸಿಕೊಳ್ಳಲಾಗತ್ತೆ ಜೊತೆಗೆ ಲೈಂಗಿಕ ಕಿರುಕುಳ ಸರ್ವೇ ಸಾಮಾನ್ಯವಾಗಿದೆ ಅಂತ ಆರೋಪಿಸಿದ್ರು. ಅಲ್ಲದೇ ನಟಿ ಅರೆಬೆತ್ತಲೆಯಾಗಿ ಪ್ರತಿಭಟಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ರು. ಇದ್ರ ಬೆನ್ನಲ್ಲೇ, ಈ ಕುರಿತು ಸ್ಯಾಂಡಲ್‍ವುಡ್ ನಟಿ ಕವಿತಾ, ಅರೆಬೆತ್ತಲೆಯಾದ ವಿಡಿಯೋ ಮಾಡಿದ್ರು. ಇದನ್ನೂ ಓದಿ: ಬಟ್ಟೆ ಬಿಚ್ಚಿ ಶ್ರೀರೆಡ್ಡಿಗೆ ತಿರುಗೇಟು ಕೊಟ್ಟ ಕನ್ನಡದ ನಟಿ ಕವಿತಾ!

ಯಾವುದೇ ಇಂಡಸ್ಟ್ರಿ ಬಗ್ಗೆ ಮಾತನಾಡುವಾಗ ಎಚ್ಚರ ವಹಿಸಿ ಮಾತನಾಡಬೇಕು. ಇಲ್ಲವಾದಲ್ಲಿ ಆಯಾ ಸಿನೆಮಾ ಇಂಡಸ್ಟ್ರಿಗಳ ಲೆಜೆಂಡ್ ಗಳಿಗೆ ಅವಮಾನಮಾಡಿದಂತಾಗತ್ತೆ ಅಂತ ನಟಿ ಕವಿತಾ, ತೆಲುಗು ನಟಿ ಶ್ರೀರೆಡ್ಡಿಗೆ ವಿಡಿಯೋ ಮೂಲಕ ಟಾಂಗ್ ಕೊಟ್ಟಿದ್ರು. ಈ ಬೆನ್ನಲ್ಲೇ ನಟಿ ಕವಿತಾ ಅವರಿಗೆ ಜೀವ ಬೆದರಿಕೆ ಕರೆಗಳು ಬರ್ತಿವೆಯಂತೆ. 24 ಗಂಟೆಗಳೊಳಗಾಗಿ ನೀನು ಪೋಸ್ಟ್ ಮಾಡಿರುವ ವಿಡಿಯೋ ಡಿಲೀಟ್ ಮಾಡ್ಬೇಕು. ಅಲ್ಲದೇ ನೀನು ಅಪ್ ಲೋಡ್ ಮಾಡಿರುವ ವಿಡಿಯೋ ಬಗ್ಗೆ ಕ್ಷಮೆಯಾಚಿಸಿ ಮತ್ತೊಂದು ವಿಡಿಯೋ ಅಪ್ ಲೋಡ್ ಮಾಡ್ಬೇಕು. ಇಲ್ಲವಾದಲ್ಲಿ ನಿನ್ನ ಕಥೆ ಮುಗಿಸಲಾಗತ್ತೆ ಅಂತ ಅಪರಿಚಿತ ದುಷ್ಕರ್ಮಿಗಳು ಬೆದರಿಕೆ ಕರೆ ಮಾಡ್ತಿದ್ದಾರಂತೆ. ಇದನ್ನೂ ಓದಿ: ಶ್ರೀ ರೆಡ್ಡಿ ಬಳಿಕ ಕಾಸ್ಟಿಂಗ್ ಕೌಚ್ ಬಗ್ಗೆ ಧ್ವನಿ ಎತ್ತಿದ ಟಾಲಿವುಡ್ ನಟಿ

ಈ ಕುರಿತು ನಟಿ ಕವಿತಾ ಶುಕ್ರವಾರ ತಡರಾತ್ರಿ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಲು ಬಂದಿದ್ರು. ಆದ್ರೆ ಅದು ಅವರ ವ್ಯಾಪ್ತಿಗೆ ಬಾರದ ಕಾರಣ ಉಪ್ಪಾರಪೇಟೆ ಪೊಲೀಸರು ದೂರು ಪಡೆಯದೇ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಸಲಹೆ ನೀಡಿ ಕಳುಹಿಸಿದ್ದಾರೆ. ಹೀಗಾಗಿ ಇಂದು ನಟಿ ಕವಿತಾ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸೈಬರ್ ಪೊಲೀಸರಿಗೆ ದೂರು ನೀಡಲಿದ್ದಾರೆ. ಇದನ್ನೂ ಓದಿ: ಬಾಹುಬಲಿ ಸ್ಟಾರ್ ನಟನ ಸಹೋದರ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ: ಶ್ರೀ ರೆಡ್ಡಿಯಿಂದ ಫೋಟೋ ರಿಲೀಸ್

Share This Article
Leave a Comment

Leave a Reply

Your email address will not be published. Required fields are marked *