ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ: ನಟಿ ವಿಜಯಲಕ್ಷ್ಮಿ

Public TV
1 Min Read

-ನಾನು ಇನ್ನು ಮುಂದೆ ತಮಿಳುನಾಡಿಗೆ ಹೋಗಲ್ಲ

ಬೆಂಗಳೂರು: ವಯೋಸಹಜವಾದ ಕಾಯಿಲೆಯಿಂದ ಇಂದು ತಾಯಿಯನ್ನು ಕಳೆದುಕೊಂಡಿರುವ ನಟಿ ವಿಜಯಲಕ್ಷ್ಮಿ ಅವರು ಎಲ್ಲರ ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ ಎಂದು ತಮ್ಮ ದುಃಖವನ್ನು ತೊಡಿಕೊಂಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚೆನ್ನೈಯಲ್ಲಿ ಸಮಸ್ಯೆ ಆಗಿ ತಾಯಿ, ಅಕ್ಕನನ್ನು ಕರೆದುಕೊಂಡು ಬೆಂಗಳೂರಿಗೆ ಬಂದಿದ್ದೇನೆ. ಅಕ್ಕ, ತಾಯಿ ನನ್ನ ಮಕ್ಕಳ ಸಮವಾಗಿದ್ದಾರೆ. ಬೆಳಗ್ಗೆ 12 ಗಂಟೆಗೆ ಅಮ್ಮನಿಗೆ ನೋಡಿ ಆಘಾತ ಆಯಿತು. ಕೂಡಲೇ ಹೋಟೆಲ್ ಅವರನ್ನು ಕರೆದು ನೋಡಿದಾಗ ಅವರು ಇನ್ನಿಲ್ಲ ಅಂತ ತಿಳಿಯಿತು. ಕೂಡಲೇ ಬಾ. ಮಾ ಹರೀಶ್ ಅವರಿಗೆ ತಿಳಿಸಿದೆ, ಅವರು ಬಂದು ಸಹಾಯ ಮಾಡುತ್ತಿದ್ದಾರೆ. ಇದನ್ನೂ ಓದಿ:  ನಟಿ ವಿಜಯಲಕ್ಷ್ಮಿ ತಾಯಿ ನಿಧನ

ಸಾಕಷ್ಟು ಹೊಡೆತ ತಿಂದಿದ್ದೇನೆ, ನೀವೆಲ್ಲ ಜೊತೆಗೆ ಇದ್ದೀರಾ. ಅನಾಥ ಆಶ್ರಮಕ್ಕೆ ಕರೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸುತ್ತೇವೆ. ನನ್ನ ಅಕ್ಕ ಉಷಾ ಅವರಿಗೆ ಚಿಕಿತ್ಸೆ ಕೊಡಬೇಕು. ನನ್ನ ಅಕ್ಕನಿಗೆ ಸಾಕಷ್ಟು ಸಮಸ್ಯೆ ಎದುರಾಗಿತ್ತು. ನಾನು ಮಾತನಾಡೋದು ಒರಟು ಅನ್ನಿಸಬಹುದು. ಅಕ್ಕನಿಗೆ ಎಲ್ಲಾ ರೀತಿಯ ಸೇವೆ ನಾನು ಮಾಡುತ್ತಿದ್ದೇನೆ ಎಂದು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:  ಭಾರತ್ ಬಂದ್ ಮಾಡಿದ್ದು ರೈತರಲ್ಲ, ಮಧ್ಯವರ್ತಿಗಳು: ನಾರಾಯಣಗೌಡ

ಅಮ್ಮ ಬಿಟ್ಟು ಹೋದ ಮೇಲೆ ನಾನು ಬದಲಾಗುತ್ತೇನೆ. ನಾನು ಇನ್ನು ಮುಂದೆ ತಮಿಳುನಾಡಿಗೆ ಹೋಗಲ್ಲ. ಇಲ್ಲೇ ಇರುತ್ತೇನೆ ಇಲ್ಲೇ ಜೀವನ ಸಾಗಿಸುತ್ತೇನೆ. ಅಕ್ಕನಿಗೆ ಸಮಸ್ಯೆ ಆದ ಮೇಲೆ ಅಮ್ಮ ಮಾನಸಿಕವಾಗಿ ನೊಂದಿದ್ದರು. ನೀವೆಲ್ಲಾ ಇದ್ದೀರ, ನಾನು ಧೈರ್ಯವಾಗಿ ಇರುತ್ತೇನೆ ಎಂದು ಹೇಳುತ್ತಾ ತಾಯಿ ಅಗಲಿರುವ ನೋವನ್ನು ಹೇಳಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *