ಯಾದಗಿರಿಯಲ್ಲಿ ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ – 150 ಕೆ.ಜಿ ಶ್ರೀಗಂಧ ವಶ, ಅರೋಪಿ ಅರೆಸ್ಟ್

Public TV
1 Min Read

ಯಾದಗಿರಿ: ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 15 ಲಕ್ಷ ರೂ. ಮೌಲ್ಯದ 150 ಕೆ.ಜಿ ಶ್ರೀಗಂಧದ (Sandalwood) ತುಂಡುಗಳನ್ನು ಅರಣ್ಯಾಧಿಕಾರಿಗಳು (Forest Department) ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ಬಗ್ಗಲಮಡು-ಹಂದಿರಕಿ ರಸ್ತೆಯಲ್ಲಿ ನಡೆದಿದೆ. ಈ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.

ಶ್ರೀಗಂಧ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಮಹಾರಾಷ್ಟ್ರದ ಸತಾರ ಜಿಲ್ಲೆಯ ಆರೋಪಿ ಸಚಿನ್ ಎಂಬಾತ ಸಿಕ್ಕಿಬಿದ್ದಿದ್ದಾನೆ. ಮತ್ತೋರ್ವ ಆರೋಪಿ ಪಾಂಡುರಂಗ ಎಂಬಾತ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮುಖ ನೋಡಿ ಯಾರ್ ದುಡ್ಡು ಕೊಡ್ತಾರೆ ಮೇಡಂ: ಚೈತ್ರಾ ಹೇಳಿದ್ದೇನು?

ಈ ಬಗ್ಗೆ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್ ಪ್ರತಿಕ್ರಿಯಿಸಿ, ಬಂಧಿತನಿಂದ 1.5 ಕ್ವಿಂಟಾಲ್ ಶ್ರೀಗಂಧ, ಒಂದು ಕಾರು, ಒಂದು ಬೈಕ್ ಹಾಗೂ ಎರಡು ಕೊಡಲಿ ಜಪ್ತಿ ಮಾಡಲಾಗಿದೆ ಎಂದಿದ್ದಾರೆ. ಈ ಸಂಬಂಧ ಅರಣ್ಯ ರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಣಕ್ಕಾಗಿ ಗರ್ಭಿಣಿ ಪತ್ನಿಯ ಕತ್ತನ್ನು ಬ್ಲೇಡ್‍ನಿಂದ ಕೂಯ್ದು ಕೊಲೆಗೈದ ಪತಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್