ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಅನರ್ಹ ಫಲಾನುಭವಿಗಳಿಗೆ ಕೋಕ್‌ ನೀಡಲು ಮುಂದಾದ ಸರ್ಕಾರ

Public TV
1 Min Read

ಬೆಂಗಳೂರು: ಬಿಪಿಎಲ್ ಕಾರ್ಡ್ (BPL Card) ಬೆನ್ನಲ್ಲೇ ಸರ್ಕಾರ ಈಗ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ (Sandhya Suraksha) ಅನರ್ಹ ಫಲಾನುಭವಿಗಳಿಗೆ ಕೊಕ್ ನೀಡಲು ಮುಂದಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಆಯುಕ್ತಾಲಯದಿಂದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ ಪತ್ರ ಬರೆಯಲಾಗಿದೆ. ಅನರ್ಹರನ್ನು ಗುರುತಿಸಲು ಇಲಾಖೆಯಿಂದ ತಹಶೀಲ್ದಾರ್ ನೇತೃತ್ವದ ಟೀಮ್ ರಚನೆ ಮಾಡಲಾಗಿದೆ. ಸಂಯೋಜನೆ ಆಪ್ ಮೂಲಕ ಅನರ್ಹರ ಪತ್ತೆ ಪ್ರಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್

ಪ್ರಸ್ತಾವಿತ ಫಲಾನುಭವಿಗಳ ವಿವರಗಳನ್ನು ವಯಸ್ಸು, ಆದಾಯ, ರೇಷನ್ ಕಾರ್ಡ್ ವಿವರ, ಐಟಿ ವಿವರ ಈ ಮಾನದಂಡಗಳನ್ನು ಭೌತಿಕವಾಗಿ ಪರಿಶೀಲಿಸಲು ಸೂಚಿಸಲಾಗಿದೆ. ಕಚೇರಿಯ ಸೂಕ್ತ ನಿರ್ದೇಶನ ಪಾಲಿಸಲು ಸೂಚಿಸಲಾಗಿದೆ. ಈಗಾಗಲೇ 23.19 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರತಿಸಲಾಗಿದೆ.

ಇನ್ನೂ ಇದರ ನಡುವೆಯೇ ನಮ್ಮ ನೆರೆ ರಾಜ್ಯ ತೆಲಂಗಾಣ ಸಿಎಂ ಕೂಡ ರಾಜ್ಯದಲ್ಲಿ ಫಲಾನುಭವಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರ ಹಣಕಾಸಿನ ಸಮಸ್ಯೆ ಎದುರಿಸುತ್ತಿದೆ ಎಂದು ಹೇಳಿದ್ದಾರೆ. ನಿವೃತ್ತ ಸರ್ಕಾರಿ ನೌಕರರಿಗೆ ನಿವೃತ್ತಿ ಸೌಲಭ್ಯ ನೀಡಲು ಕಷ್ಟವಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸಾಧ್ಯವಾಗ್ತಿಲ್ಲ. ಶಾದಿ ಮುಬಾರಕ್, ಕಲ್ಯಾಣ ಲಕ್ಷ್ಮಿ ಯೋಜನೆ ಅನುಷ್ಠಾನಕ್ಕೂ ತೊಂದರೆಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬಹುಕೋಟಿ ವಂಚನೆ ಪ್ರಕರಣ – ಐಶ್ವರ್ಯಗೌಡಗೆ ಜಾಮೀನು

Share This Article