ಗೆಲ್ಲುವ ವ್ಯಕ್ತಿಯನ್ನು ಬಿಟ್ಟು ಇನ್ಯಾರೋ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಪಕ್ಷಕ್ಕೆ ನಷ್ಟ: ಸಂಗಣ್ಣ ಕರಡಿ ಅಭಿಮಾನಿಗಳು

Public TV
1 Min Read

ಕೊಪ್ಪಳ: ಹಾಲಿ ಸಂಸದರಿಗೆ ಟಿಕೆಟ್ ನೀಡಲು ಮೀನಾ ಮೇಷ ತೋರುತ್ತಿರುವ ಬಿಜೆಪಿ ಹೈಕಮಾಂಡ್ ವಿರುದ್ಧ ಕೊಪ್ಪಳದಲ್ಲಿ ಆಕ್ರೋಶ ವ್ಯಕ್ತವಾಗುತ್ತದೆ.

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಚಾರವಾಗಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಬೇಕು ಎಂದು ಗೊಂದಲದಲ್ಲಿದೆ. ಈ ವೇಳೆ ಹಾಲಿ ಸಂಸದ ಸಂಗಣ್ಣ ಕರಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿ ಮತ್ತು ಒಮ್ಮೆ ಸಂಸದರಾಗಿ ಆಯ್ಕೆಯಾದ ಸಂಗಣ್ಣ ಕರಡಿಯವರಿಗೆ ಟಿಕೆಟ್ ಕೊಡಲೇಬೇಕು. ಗೆಲ್ಲುವ ವ್ಯಕ್ತಿಯನ್ನು ಬಿಟ್ಟು ಇನ್ಯಾರೋ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಪಕ್ಷಕ್ಕೆ ನಷ್ಟವಾಗುತ್ತದೆ. ಕರಡಿ ಸಂಗಣ್ಣಗೆ ಟಿಕೆಟ್ ಕೊಡಿ ಇಲ್ಲಾಂದ್ರೆ ನಾವ್ ಬಿಜೆಪಿ ಬೆಂಬಲಿಸಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂಗಣ್ಣ ಕರಡಿ ಅಭಿಮಾನಿಗಳು ಪೋಸ್ಟ್ ಹಾಕಿದ್ದಾರೆ.

ಇದರ ಜೊತೆಗೆ ಕೆಳಗಡೆ ನೊಂದ ಬಿಜೆಪಿ ಅಭಿಮಾನಿ ನೊಂದ ಮೋದಿ ಜೀ ಅಭಿಮಾನಿ. ಒಂದು ವೇಳೆ ಸಂಗಣ್ಣ ಕರಡಿಗೆ ಟಿಕೆಟ್ ತಪ್ಪಿದ್ದಲ್ಲಿ ನಾವು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಪೋಸ್ಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *