ಮಾನವೀಯತೆ ಮರೆತ ಸ್ಪರ್ಧಿಗಳು- ಸಂಗೀತಾ ಸಹೋದರ ಬೇಸರ

Public TV
1 Min Read

ಬಿಗ್ ಬಾಸ್ ಮನೆಯ (Bigg Boss Kannada 10) ಕುರಿತು ಸದ್ಯ ಸಿಕ್ಕಾಪಟ್ಟೆ ಸುದ್ದಿಯಾಗ್ತಿರೋ ವಿಚಾರ ಅಂದರೆ ಸಂಗೀತಾ- ಪ್ರತಾಪ್ (Prathap) ಜೊತೆ ಸ್ಪರ್ಧಿಗಳು ರಾಕ್ಷಸರಂತೆಯೇ ವರ್ತಿಸಿರೋದು. ಈ ಪರಿಣಾಮ, ಸಂಗೀತಾ- ಪ್ರತಾಪ್ ಆಸ್ಪತ್ರೆಗೆ ಸೇರಿದ್ದು. ಈ ಬೆನ್ನಲ್ಲೇ, ಸಂಗೀತಾ ಸಹೋದರ ಸಂತೋಷ್ ಕುಮಾರ್ (Santhosh Kumar) ಸ್ಪರ್ಧಿಗಳ ಕ್ರೂರತ್ವದ ಬಗ್ಗೆ ಸಿಡಿದೆದಿದ್ದಾರೆ.

ಸದ್ಯ ಇಬ್ಬರೂ ಚಿಕಿತ್ಸೆ ಪಡೆದು, ಈಗ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಇದೆಲ್ಲದರ ನಡುವೆ ಸಂಗೀತಾ ಶೃಂಗೇರಿ ಸಹೋದರ ಸಂತೋಷ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಟ ಸುದೀಪ್ ಹಾಗೂ ವಾಹಿನಿಗೆ ಕುರಿತು ಬೇಸರ ಹೊರಹಾಕಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದು, ಅದರ ಸ್ಕ್ರಿನ್‌ಶಾಟ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ಸಿಎಂ, ಗಣ್ಯರ ಅಂತಿಮ ದರ್ಶನದ ಬಳಿಕ ಲೀಲಾವತಿ ಅಂತಿಮ ಸಂಸ್ಕಾರ

ಸುದೀಪ್ ಸರ್, ನೀವು ಹೇಳಿದ್ದಿರಿ. ಬಿಗ್‌ಬಾಸ್ ಮನೆ ಸುರಕ್ಷಿತ. ಏನು ಆಗಲ್ಲ ಅಂತ. ಆದರೆ ಈಗ ನೋಡಿದ್ರೆ, ಇದು ಹಾಗಿಲ್ಲ. ಇದು ಕುಟುಂಬದ ಶೋ ಅಂತ ಕಾಣಲ್ಲ. ಕೇವಲ ಹಿಂಸೆಯೇ ಕಾಣ್ತಿದೆ. ಕುಟುಂಬದವರು ಈ ರೀತಿಯ ಆಕ್ರಮಣಕಾರಿ ವರ್ತನೆಯನ್ನು ಹೇಗೆ ನೋಡ್ತಾರೆ ಎಂದು ಪ್ರಶ್ನಿಸಿದ್ದಾರೆ. ವಾಹಿನಿ, ನಾವ್ ಸುದೀಪ್ ಸರ್ ಇದರ ಬಗ್ಗೆ ಸರಿ ಮಾಡುವವರೆಗೂ ನಾವು ಯಾಕೆ ಕಾಯಬೇಕು ಎಂದು ಸಂಗೀತಾ ಸಹೋದರ ಸಂತೋಷ್‌ ಕುಮಾರ್‌ ಪ್ರಶ್ನೆ ಮಾಡಿದ್ದಾರೆ.

ಬಿಗ್ ಬಾಸ್ ಇರೋದು ಜನರ ತಪ್ಪುಗಳನ್ನು ತಕ್ಷಣ ಅವರಿಗೆ ಅರ್ಥ ಮಾಡಿಸಲು ಅಲ್ಲವೇ? ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೀಕ್ಷಕರು ಕೂಡ ಈ ಬಗ್ಗೆ ಬೇಸರ ಹೊರ ಹಾಕುತ್ತಿದ್ದಾರೆ.

ಸದ್ಯ ಬಿಗ್ ಬಾಸ್ ವಾರಾಂತ್ಯದ ಸುದೀಪ್ ಮಾತುಕತೆ ವೇಳೆ, ಸಂಗೀತಾ ಮತ್ತು ಪ್ರತಾಪ್ ಇಬ್ಬರೂ ಎಂಟ್ರಿ ಕೊಟ್ಟಿದ್ದು, ಆರೋಗ್ಯದ ಸ್ಥಿತಿ ಹೇಗಿದೆ ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.

Share This Article