ಸಂಕ್ರಾಂತಿ ಸಂಭ್ರಮಕ್ಕಾಗಿ ಮತ್ತೆ ಜೊತೆಯಾದ ಬಿಗ್ ಬಾಸ್ ಸ್ಪರ್ಧಿಗಳು

Public TV
1 Min Read

ಬಿಗ್ ಬಾಸ್ ಸೀಸನ್ 9ರ (Bigg Boss Kannada 9) ಆಟಕ್ಕೆ ತೆರೆ ಬಿದ್ದಿದೆ. ಈ ಸೀಸನ್ ವಿನ್ನರ್ ಆಗಿ ರೂಪೇಶ್ ಶೆಟ್ಟಿ ಹೊರಹೊಮ್ಮಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಸಂಕ್ರಾಂತಿ ಹಬ್ಬದ (Sankranti Festival) ಆಚರಣೆಗಾಗಿ ಬಿಗ್ ಬಾಸ್ ಸ್ಪರ್ಧಿಗಳು ಮತ್ತೆ ಜೊತೆಯಾಗಿದ್ದಾರೆ. ಈ ಕುರಿತ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

ಈ ಬಾರಿ ಪ್ರವೀಣರು ಮತ್ತು ನವೀನರು ಎಂಬ ಭಿನ್ನವಾಗಿರುವ ಥೀಮ್ ಜೊತೆ ಬಿಗ್ ಬಾಸ್ ಶೋ ಮಾಡಲಾಗಿತ್ತು. ಸಾಕಷ್ಟು ಟ್ವಿಸ್ಟ್‌ಗಳ ಮಧ್ಯೆ ಆಟಕ್ಕೆ ತೆರೆ ಬಿದ್ದಿದೆ. ರೂಪೇಶ್ (Roopesh Shetty) ವಿನ್ನರ್ ಆದರೆ, ರಾಕೇಶ್ ಅಡಿಗ (Rakesh Adiga)  ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಸಂಕ್ರಾಂತಿ ಹಬ್ಬಕ್ಕಾಗಿ ಬಿಗ್ ಬಾಸ್‌ನ ಕೆಲ ಸ್ಪರ್ಧಿಗಳು ಒಟ್ಟಿಗೆ ಸೇರಿದ್ದಾರೆ.

ಖಾಸಗಿ ವಾಹಿನಿ ಸ್ಪೆಷಲ್ ಸಂದರ್ಶನಕ್ಕಾಗಿ ಸಂಕ್ರಾಂತಿ ಹಬ್ಬದಲ್ಲಿ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಕಾವ್ಯಶ್ರೀ, ದೀಪಿಕಾ ದಾಸ್, ರೂಪೇಶ್ ರಾಜಣ್ಣ ಹೀಗೆ ಎಲ್ಲರೂ ಒಟ್ಟಾಗಿದ್ದಾರೆ. ಜೊತೆಯಾಗಿ ಸಂಕ್ರಾಂತಿ ಹಬ್ಬವನ್ನ ಆಚರಣೆ ಮಾಡಿದ್ದಾರೆ. ಆದರೆ ಸಾನ್ಯ ಅಯ್ಯರ್ (Sanya Iyer) ಈ ಸಂಭ್ರಮದಲ್ಲಿ ಮಿಸ್ ಆಗಿದ್ದಾರೆ. ಇದನ್ನೂ ಓದಿ: ತೆರಿಗೆ ಇಲಾಖೆ ವಿರುದ್ದ ಹೈಕೋರ್ಟ್ ಮೆಟ್ಟಿಲು ಏರಿದ ನಟಿ ಅನುಷ್ಕಾ ಶರ್ಮಾ

 

View this post on Instagram

 

A post shared by Deepika Das (@deepika__das)

ಬಿಗ್ ಬಾಸ್ (Bigg Boss) ನೆಚ್ಚಿನ ಸ್ಪರ್ಧಿಗಳು ಮತ್ತೆ ಜೊತೆಯಾಗಿರುವುದು ಅಭಿಮಾನಿಗಳು ಖುಷಿಕೊಟ್ಟಿದೆ. ಸದ್ಯ ಫೋಟೋಗಳು ಇಂಟರ್‌ನೆಟ್‌ನಲ್ಲಿ ಹೈಪ್ ಕ್ರಿಯೆಟ್ ಮಾಡಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *