ಗುಜರಾತ್ ಪ್ರವಾಸ ಮುಗಿಸಿ ಆರಗ ವಾಪಸ್ ಆಗ್ತಿದ್ದಂತೆ ಸ್ಯಾಂಟ್ರೋ ರವಿ ಅರೆಸ್ಟ್- ರಾಜ್ಯ ರಾಜಕೀಯದಲ್ಲಿ ಸಂಚಲನ

Public TV
1 Min Read

ಬೆಂಗಳೂರು: ಒಂದೆಡೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಗುಜರಾತ್ ಪ್ರವಾಸ, ಮತ್ತೊಂದೆಡೆ ಗೃಹಸಚಿವ ಪ್ರವಾಸದಿಂದ ಬಂದ ಮಾರನೇ ದಿನ ಗುಜರಾತ್‍ನಲ್ಲೇ ಸ್ಯಾಂಟ್ರೋ ರವಿ ಬಂಧನ. ಈ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಎರಡು ಒಂದಕ್ಕೊಂದು ಇಂಟರ್‍ಲಿಂಕ್ ಹೊಂದಿದೆ ಎಂದು ಕಾಂಗ್ರೆಸ್ (Congress) ಆರೋಪಿಸ್ತಿದೆ.

ಇದು ಕಾಕಾತಾಳಿಯವೋ..? ತಪ್ಪಿಸಿಕೊಳ್ಳಲು ಸ್ಯಾಂಟ್ರೋ ಮಾಡಿದ ಕಳ್ಳಾಟವೋ ಗೊತ್ತಿಲ್ಲ. 2 ದಿನದ ಹಿಂದಷ್ಟೇ ಗುಜರಾತ್ ಟೂರ್ ಗೆ ಗೃಹಸಚಿವ ಆರಗ ಹೋಗಿದ್ದರು. ವಿಧಿ-ವಿಜ್ಞಾನ ವಿಶ್ವವಿದ್ಯಾನಿಲಯಕ್ಕೆ ಸಂಬಂಧಪಟ್ಟಂತೆ ಎರಡು ದಿನಗಳ ಗುಜರಾತ್ ಪ್ರವಾಸ ಕೈಗೊಂಡಿದ್ದರು. ಇದೇ ವೇಳೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಭೇಟಿಯಾಗಿ ಸೌಹಾರ್ದಯುತವಾದ ಮಾತುಕತೆ ನಡೆಸಿದ್ರು.  ಇದನ್ನೂ ಓದಿ: ಸ್ಯಾಂಟ್ರೋ ರವಿಗೆ ಜೀವಾವಧಿ ಶಿಕ್ಷೆ ಆಗಬೇಕು: ಪತ್ನಿ ಮನವಿ

ಅಹಮದಾಬಾದ್‍ನಿಂದ ಮೊನ್ನೆ ರಾತ್ರಿ ಗುಜರಾತ್ ಪ್ರವಾಸ ಮುಗಿಸಿ ಆರಗ ಜ್ಞಾನೇಂದ್ರ ರಾಜ್ಯಕ್ಕೆ ವಾಪಸ್ ಆಗಿದ್ರು. ಇದೇ ಸಂಧರ್ಭದಲ್ಲಿ ಅಹಮದಾಬಾದ್‍ನಲ್ಲೇ ಸ್ಯಾಂಟ್ರೋ ರವಿ (Santro Ravi) ಬಂಧನ ಆಗಿರುವುದಕ್ಕೆ ಕಾಂಗ್ರೆಸ್ ಗುಮಾನಿ ವ್ಯಕ್ತಪಡಿಸಿದೆ. ಅಲ್ಲದೇ ಕುಮಾರಸ್ವಾಮಿ ಸಹ ಗೃಹ ಸಚಿವರ ಮೇಲೆ ಅನುಮಾನವ್ಯಕ್ತಪಡಿಸಿ ಟಾಂಗ್ ನೀಡಿದ್ದಾರೆ. ಇದರಿಂದ ಮುಜುಗರಕ್ಕೊಳಗಾದ ಗೃಹಸಚಿವರು ಕೆಂಡವಾಗಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ಅರೆಸ್ಟ್‌ – ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ..

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *